Featured

ಮಂಗಳೂರು: ಮೆಲ್ರಿಕ್ ಅಂಥೊನಿ ಹತ್ಯೆ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ -Vishwanews24

ಮಂಗಳೂರು : ಗೋರಿಗುಡ್ಡೆ ಮೆಲ್ರಿಕ್ ಡಿಸೋಜ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ಪ್ರಕಟಿಸಿದೆ.

ಗೋರಿಗುಡ್ಡೆ ವೆಲೆನ್ಸಿಯಾ ನಿವಾಸಿ ನಿಶಾಕ್ ಪೂಜಾರಿ (30), ಗೋರಿಗುಡ್ಡೆ ಬೇಕಲ ಕಂಪೌಂಡ್ ನಿವಾಸಿ ವಿನೇಶ್ ಕುಮಾರ್ (32), ಮುಳಿಹಿತ್ಲು ಅರೆಕೆರೆಬೈಲ್ ಸುಬ್ಬಣ್ಣ ಶೆಟ್ಟಿ ಕಂಪೌಂಡ್ ನಿವಾಸಿ ಸಚಿನ್ ಶೆಟ್ಟಿ (23), ಜಪ್ಪಿನಮೊಗರು ತಂದೊಳಿಗೆ ಸಾಯಿ ನಿಲಯ ನಿವಾಸಿ ಗಣೇಶ್ ಕುಲಾಲ್ (27), ಗೋರಿಗುಡ್ಡೆ ಜನಾರ್ದನ ಕಂಪೌಂಡ್ ನಿವಾಸಿ ಪ್ರವೀಣ್ ಪೂಜಾರಿ (43), ಜೆಪ್ಪು ಕುಡುಪಾಡಿ ಮೋಹಿನಿ ಕಂಪೌಂಡ್ ನಿವಾಸಿ ಸಂದೀಪ್ ಶೆಟ್ಟಿ (34) ಶಿಕ್ಷೆಗೊಳಗಾದ ಅಪರಾಧಿಗಳು.

ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಮಲಿಂಗೇಗೌಡ 20 ಸಾಕ್ಷಿ ಹಾಗೂ 54 ದಾಖಲೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಪರಾಧಿಗಳಿಗೆ ಐಪಿಸಿ 302 (ಕೊಲೆ) ರಡಿ ಜೀವಾವಧಿ ಹಾಗೂ ತಲಾ ಮೂರು ಸಾವಿರ ರೂ. ದಂಡ, 109 (ಪ್ರೇರೇಪಣೆ)ರಡಿ ತಲಾ ಮೂರು ಸಾವಿರ ರೂ. ದಂಡ, 120 ಬಿ (ಸಂಚು)ರಡಿ ತಲಾ ಮೂರು ಸಾವಿರ ರೂ., 144 (ಅಕ್ರಮ ಕೂಟ)ರಡಿ ನಾಲ್ಕು ತಿಂಗಳು ಸಜೆ, 147ರಡಿ ಒಂದು ವರ್ಷ ಸಜೆ, 148ರಡಿ ಎರಡು ವರ್ಷ, 448 (ಅಕ್ರಮ ಪ್ರವೇಶ) ರಡಿ, 506 (ಬೆದರಿಕೆ)ರಡಿ ಒಂದು ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡದ ಮೊತ್ತದಲ್ಲಿ 40 ಸಾವಿರ ರೂ. ಕೊಲೆಯಾದ ಮೆಲ್ರಿಕ್ ಅವರ ತಾಯಿಗೆ ಪರಿಹಾರ ರೂಪದಲ್ಲಿ ನೀಡಲು ನ್ಯಾಯಾಲಯ ಆದೇಶಿಸಿದೆ.

2016ರ ಮೇ ತಿಂಗಳಲ್ಲಿ ನಡೆದಿದ್ದ ಹಲ್ಲೆ ಪ್ರಕರಣವೊಂದರಲ್ಲಿ ಮೆಲ್ರಿಕ್ ಭಾಗಿಯಾಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಮತ್ತೊಂದು ತಂಡ ದ್ವೇಷಹೊಂದಿತ್ತು. ಅವಕಾಶಕ್ಕಾಗಿ ಕಾಯುತ್ತಿದ್ದ ತಂಡ 2017ರ ಕ್ರಿಸ್ಮಸ್ ಹಬ್ಬದಂದು ಮೆಲ್ರಿಕ್ ಗೆ ಮುಹೂರ್ತ ನಿಗದಿ ಪಡಿಸಿತ್ತು.

ಮಧ್ಯರಾತ್ರಿ 1:15ರ ಸುಮಾರಿಗೆ ಮೆಲ್ರಿಕ್ನ ವೆಲೆನ್ಸಿಯಾ ಮನೆಗೆ ದಾಳಿ ಮಾಡಿ ಬಾಗಿಲನ್ನು ಕಾಲಿನಿಂದ ತುಳಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಈ ಸಂದರ್ಭ ಮೆಲ್ರಿಕ್ ಮತ್ತು ಆತನ ಅಜ್ಜಿ ಮಾತ್ರ ಮನೆಯಲ್ಲಿದ್ದರು. ಆರೋಪಿಗಳು ಏಕಾಏಕಿ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ವಿಷಯ ತಿಳಿದ ಮೆಲ್ರಿಕ್ನ ಸಹಪಾಠಿ ಸುಶೀಲ್ ಕೂಡಲೇ ಮೆಲ್ರಿಕ್ನನ್ನು ಆಸ್ಪತ್ರೆಗೆ ಕೊಂಡೊಯ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಮೆಲ್ರಿಕ್ನನ್ನು ಆಸ್ಪತ್ರೆಗೆ ಸೇರಿಸಿದ ಸ್ನೇಹಿತ ಸುಶೀಲ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು.

 

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

20 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

21 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

21 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

21 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

22 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

22 hours ago