Featured

ಮಂಗಳೂರು : ಮೊಬೈಲ್ ಕದ್ದನೆಂದು ಆರೋಪಿಸಿ ಮೀನುಗಾರನನ್ನು ಬಂದರ್ ನಲ್ಲಿ  ತಲೆಕೆಳಗೆ ತೂಗು ಹಾಕಿ ಹಲ್ಲೆ – Vishwanews24

ಮಂಗಳೂರು:ಮೊಬೈಲ್ ಕದ್ದನೆಂದು ಆರೋಪಿಸಿ ಮೀನುಗಾರನನ್ನು ಬಂದರ್ ನಲ್ಲಿ  ತಲೆಕೆಳಗೆ ತೂಗು ಹಾಕಿ ಹಲ್ಲೆ – Vishwanews24

ಮಂಗಳೂರು: ನಗರದ ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ನ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರು ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ.

ಈತನನ್ನು ಇತರ ಮೀನುಗಾರ ಕಾರ್ಮಿಕರು ಬೋಟ್ ನ ಕ್ರೇನ್ ಗೆ ಕಾಲು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ‌ಹಿಂಸಿಸುತ್ತಿರುವ ಹಾಗೂ ಹೊಡೆಯುವಂತೆ ಪ್ರೇರೆಪಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯಾಗಿ ತೂಗು ಹಾಕಿದ್ದರು ಎಂದು ಪೊಲೀಸ್ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು , ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

7 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

8 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

8 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

9 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

9 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

9 hours ago