Featured

ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ  : ಬಿರುವೆರ್ ಕುಡ್ಲ ಸಂಘಟನೆ ಅಸಮಾಧಾನ – Vishwanews24

ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ  : ಬಿರುವೆರ್ ಕುಡ್ಲ ಸಂಘಟನೆ ಅಸಮಾಧಾನ

ಮಂಗಳೂರು: ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ನಡೆಸಿದ್ದು, ಇದರ ಬೆನ್ನಲ್ಲೇ ಬಿರುವೆರ್ ಕುಡ್ಲ ಸಂಘಟನೆ ತನ್ನ ಅಸಮಾಧಾನ ಹೊರಹಾಕಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ, ನಾವು ಮೋದಿಗಾಗಿ ಬಹಳಷ್ಟು ಕೆಲಸ ಮಾಡಿದ್ದೇವೆ. ಹಲವು ವಿರೋಧದ ನಡುವೆಯೂ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ್ದೇವೆ. ಆದರೆ ಮೋದಿಯ ಕಾರ್ಯಕ್ರಮದಲ್ಲಿ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಲೇಡಿಹಿಲ್ ಸರ್ಕಲ್ ಅನ್ನು ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನಾಗಿ ಮಾಡಲು ಬಿರುವೆರ್ ಕುಡ್ಲ ಸಂಘಟನೆ ಬಹಳಷ್ಟು ಶ್ರಮಿಸಿದೆ. ಸರಕಾರಕ್ಕೆ ಒತ್ತಡಹಾಕಿ, ಒಂದಷ್ಟು ಮಂದಿಯ ವಿರೋಧ ಕಟ್ಟಿಕೊಂಡು ಈ ಸರ್ಕಲ್ ಆಗುವಲ್ಲಿಯೂ ಸಂಘಟನೆ ದೊಡ್ಡಮಟ್ಟದ ಹೋರಾಟವನ್ನೇ ಮಾಡಿದೆ‌. ಇದಕ್ಕಾಗಿ ಏಳೆಂಟು ಬಾರಿ ಠಾಣೆಯ ಮೆಟ್ಟಿಲನ್ನೂ ಏರಬೇಕಾಯಿತು. ಆದರೆ ದೇಶದ ಪ್ರಧಾನಿ ಮೋದಿವರು ಬಂದು ಸರ್ಕಲ್ ನ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸಂದರ್ಭ ಬಿರುವೆರ್ ಕುಡ್ಲ ಸಂಘಟನೆಗೆ ಯಾವ ಹೇಳಿಕೆಯೂ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪಕ್ಷದಲ್ಲಿಯೇ ಇಲ್ಲದವರಿಗೆ, ಉದ್ಯಮಿಗಳಿಗೆ, ಪಕ್ಷ ವಿರೋಧ ಮಾಡಿದ್ದವರನ್ನು ಏರ್ಪೋರ್ಟ್ ನಲ್ಲಿ ಮೋದಿಯವರನ್ನು ಸ್ವಾಗತಿಸಲು ಅವಕಾಶ ನೀಡಲಾಗಿದೆ. ಆದರೆ ಈ ವೃತ್ತವಾಗಲು ಶ್ರಮಿಸಿದವರಿಗೆ ಅವಕಾಶವಿಲ್ಲ. ತನಗೆ ಎಂಎಲ್ಎ ಸೀಟ್ ದೊರಕಿಸಿಕೊಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ನಳಿನ್ ಗೆ ಒತ್ತಡ ಹಾಕಿ ಎಂದು ಹೇಳಲು ಪದೇಪದೇ ಕರೆ ಮಾಡುತ್ತಿದ್ದ ಸತೀಶ್ ಕುಂಪಲರಿಗೆ ಈಗ ನಾವು ಮರೆತುಹೋಗಿದ್ದೇವೆ. ಅವರಿಗೆ ಈಗ ಇರುವ ಬಿಜೆಪಿ ಜಿಲ್ಲಾಧ್ಯಕ್ಷ ಪಟ್ಟ ಮೂರು ವರ್ಷದವರೆಗೆ ಮಾತ್ರ ಇರಲಿದೆ. ಆ ಬಳಿಕ ಅವರೂ ಸಾಮಾನ್ಯ ಕಾರ್ಯಕರ್ತರೇ. ಸದ್ಯ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಎರಡು ಬಣಗಳಾಗಿದೆ. ನಳಿನ್ ಜೊತೆಯಿದ್ದವರನ್ನು ಸೈಡ್ ಲೈನ್ ಮಾಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಉದಯ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago