ಮಂಗಳೂರು : ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯಿಂದಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಂಸತ್ತಿನಿಂದ 142 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು .
ಪ್ರತಿಭಟನೆ ಉದ್ದೇಶಿಸಿಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್. ಸಂಸತ್ತಿನಲ್ಲಿ ನಡೆದ ದಾಂಧಲೆಗೆ ಭದ್ರತಾ ವೈಫಲ್ಯ ಕಾರಣವಾಗಿದ್ದು ಅದಕ್ಕೆ ಗೃಹ ಸಚಿವರು ಸ್ಪಷ್ಟೀಕರಣ ನೀಡಬೇಕಾಗಿದ್ದು, ಕೇಳಿದ್ದಕ್ಕೆ ಸಂಸದರನ್ನು ಅಮಾನತು ಮಾಡಲಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಯಾವುದನ್ನೂ ಪ್ರಶ್ನಿಸಲು ಅವಕಾಶವಿಲ್ಲ. ತನಿಖಾ ಸಂಸ್ಥೆಗಳನ್ನು ಬಳಸಿ ವಿಪಕ್ಷಗಳ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ವಿಪಕ್ಷಗಳ ಆಡಳಿತ ಇರುವಲ್ಲಿ ರಾಜ್ಯಪಾಲರನ್ನು ಬಳಸಿಕೊಂಡು ತೊಂದರೆ ನೀಡಲಾಗುತ್ತಿದೆ.
ದೇಶದ ಪ್ರಜಾಪ್ರಭುತ್ವ, ಜಾತ್ಯಾತೀತ, ಸಮಾಜವಾದದ ವ್ಯವಸ್ಥೆ, ಸಂಸ್ಕೃತಿಯನ್ನು ನಾಶ ಪಡಿಸಲಾಗುತ್ತಿದೆ. ಮೂಲಭೂತ ಹಕ್ಕುಗಳು ದಿನೇ ದಿನೇ ಕ್ಷೀಣಿಸುತ್ತಿದೆ. ಮಾಧ್ಯಮಗಳು ಕೂಡ ಪ್ರಶ್ನೆ ಮಾಡಲಾಗದಂತಹ ಸ್ಥಿತಿ ಇದೆ. ಪ್ರಧಾನಿ ಮೂರನೆ ಬಾರಿ ಪ್ರಧಾನಿಯಾದರೆ ಸಂವಿಧಾನ ಕೂಡ ಉಳಿಯುವುದಿಲ್ಲ. ಯಾವ ಸಂಸ್ಥೆಯು ಇರುವುದಿಲ್ಲ. ಮೋದಿಯವರನ್ನು ಪೂಜೆ ಮಾಡಿ ಕುಳಿತುಕೊಳ್ಳುವ ಸ್ಥಿತಿ ಬರಲಿದೆ. ಸರ್ವಾಧಿಕಾರ ಧೋರಣೆ ವಿರುದ್ದ ಹೋರಾಟ ಮುಂದುವರೆಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಹಾಗೂ ಕಾಂಗ್ರೆಸ್ ಮುಖಂಡರುಗಳಾದ ಮಿಥುನ್ ರೈ, ಮಮತಾ ಗಟ್ಟಿ, ಶಶಿಧರ ಹೆಗ್ಡೆ ಮೊದಲಾದವರು ಪಾಲ್ಗೊಂಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…