Featured

ಮಂಗಳೂರು : ಮ್ಯಾಟ್ರಿಮೋನಿ ಮೂಲಕ ಮದುವೆಯಾಗುವ ನೆಪದಲ್ಲಿ ಹಲವರಿಂದ ಹಣ ಪಡೆದು ವಂಚನೆ ; ಇಬ್ಬರ ಬಂಧನ – vishwanews24 https://wp.me/p9KQap-sZf

ಮಂಗಳೂರು : ಮ್ಯಾಟ್ರಿಮೋನಿ ಮೂಲಕ ಸರಣಿ ವೈವಾಹಿಕ ವಂಚನೆ ; ಇಬ್ಬರ ಬಂಧನ

ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿಯಲ್ ವೇದಿಕೆಗಳ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಸರಣಿ ವೈವಾಹಿಕ ವಂಚಕನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ವಂಚನೆಗೆ ಸಹಕರಿಸಿದ್ದ ಸಹಚರನನ್ನೂ ಬಂಧಿಸಲಾಗಿದೆ.

ಬಂಧಿತ ಪ್ರಮುಖ ಆರೋಪಿಯನ್ನು ಸುಶಾಂತ್ ಪೂಜಾರಿ ಅಲಿಯಾಸ್ ಸುಶಾಂತ್ ಅಂಕುಶ ಪೂಜಾರಿ ಅಲಿಯಾಸ್ ಸುಶಾಂತ್ ಜಿ. ಕರ್ಕೇರ (32) ಎಂದು ಗುರುತಿಸಲಾಗಿದೆ. ವಂಚನೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮೂಲ್ಕಿ ನಿವಾಸಿ ಭಾಸ್ಕರ್‌ನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆನ್‌ಲೈನ್ ಮ್ಯಾಟ್ರಿಮೋನಿಯಲ್ ಪ್ಲಾಟ್‌ಫಾರ್ಮ್‌ ಮೂಲಕ ಪರಿಚಯವಾದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಸುಶಾಂತ್ ಫೆಬ್ರವರಿ 2, 2025ರಂದು ನವಿ ಮುಂಬೈನಲ್ಲಿ ತನ್ನನ್ನು ಮದುವೆಯಾಗಿದ್ದಾನೆ. ಮದುವೆಯ ನಂತರ ವಿವಿಧ ಕಾರಣಗಳನ್ನು ನೀಡಿ ಹಲವು ಕಂತುಗಳಲ್ಲಿ ಒಟ್ಟು ರೂ. 6.60 ಲಕ್ಷವನ್ನು ಪಡೆದಿದ್ದಾನೆ. ಬಳಿಕ ನವೆಂಬರ್ 15, 2025ರಂದು ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:

ತನಿಖೆಯ ವೇಳೆ, ಆರೋಪಿ ಈ ಹಿಂದೆ ಕೂಡ ಮದುವೆಯಾಗಿದ್ದು, ಇದೇ ರೀತಿಯ ಮೋಸದ ಮೂಲಕ ಇತರ ಮಹಿಳೆಯರನ್ನೂ ವಂಚಿಸಿರುವುದು ಬಹಿರಂಗವಾಗಿದೆ. ಫೆಬ್ರವರಿ 5, 2026ರಂದು ಬಂಧನಕ್ಕೊಳಗಾದ ಸುಶಾಂತ್ ವಿಚಾರಣೆಯಲ್ಲಿ ಹಲವು ವಂಚನೆ ಪ್ರಕರಣಗಳಲ್ಲಿ ತಾನು ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. 2021ರಲ್ಲಿ ಉಡುಪಿಯ ಮಹಿಳೆಯೊಬ್ಬರನ್ನು ಮದುವೆಯಾಗಿದ್ದಾನೆ ಎಂಬ ಮಾಹಿತಿ ದೊರೆತಿದೆ.

ಉಡುಪಿ, ಮುಂಬೈ ಹಾಗೂ ಬೆಂಗಳೂರಿನ ತಲಾ ಇಬ್ಬರು ಮಹಿಳೆಯರು ಮತ್ತು ಕಾರ್ಕಳದ ಒಬ್ಬ ಮಹಿಳೆಗೆ ಮದುವೆಯ ಭರವಸೆ ನೀಡಿ ಹಣ ಸುಲಿಗೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರ ಕುಟುಂಬಗಳ ವಿಶ್ವಾಸ ಗಳಿಸಲು ಭಾಸ್ಕರ್ ತನ್ನನ್ನು ಸುಶಾಂತ್‌ನ ಚಿಕ್ಕಪ್ಪನಂತೆ ಪರಿಚಯಿಸಿಕೊಂಡು ನೆರವಾಗುತ್ತಿದ್ದನು. ಮುಂಬೈನಲ್ಲಿ ನಡೆದ ಧಾರ್ಮಿಕ ಮದುವೆ ಸಮಾರಂಭದಲ್ಲಿಯೂ ಕುಟುಂಬದ ಹಿರಿಯನಂತೆ ನಡೆದುಕೊಂಡು ವಿವಾಹವನ್ನು ಕಾನೂನುಬದ್ಧಗೊಳಿಸಲು ಸಹಕರಿಸಿದ್ದಾನೆ ಎಂಬ ಆರೋಪವಿದೆ.

ಸುಶಾಂತ್ ಪೂಜಾರಿ ವಿರುದ್ಧ ಈಗಾಗಲೇ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ, ಉಡುಪಿಯ ಕೋಟ ಠಾಣೆಯಲ್ಲಿ ಕಳ್ಳತನ ಪ್ರಕರಣ ಹಾಗೂ ಮಹಾರಾಷ್ಟ್ರದ ಅರ್ನಾಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಅನೈತಿಕ ಕಳ್ಳಸಾಗಣೆ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಬಂಧಿತ ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

7 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

8 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago