Featured

ಮಂಗಳೂರು: ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ; ಕರಾವಳಿ ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ತೊಂದರೆ – Vishwanews24

ಮಂಗಳೂರು: ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ; ಕರಾವಳಿ ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ತೊಂದರೆ

ಮಂಗಳೂರು: ತುಳುನಾಡಿನ ಕಾಂತಾರ ಸಿನಿಮಾ ಹಳ್ಳಿಯಿಂದ ದಿಲ್ಲಿಯವರೆಗೆ ಸದ್ದು ಮಾಡುತ್ತಿದೆ. ಇದರಿಂದಾಗಿ ಈ ಬಾರಿ ತುಳುನಾಡಿನ ಕಂಬಳ, ಕೋಲ, ನೇಮಗಳಿಗೆ ಇನ್ನಿಲ್ಲದ ಮಹತ್ವ ಬಂದಿದೆ. ಆದರೆ ಇಲ್ಲಿನ ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ಆದೇಶದಿಂದ ಕರಿಛಾಯೆ ಆವರಿಸಿದೆ. ಇದರಿಂದ ಮೇಳದ ಯಜಮಾನರು, ಕಂಬಳ ಸಂಘಟಕರು ಗೊಂದಲದಲ್ಲಿ ಸಿಲುಕಿದ್ದಾರೆ.

ಸುಪ್ರೀಂ ಕೋರ್ಟ್‌ ಶಬ್ಧಮಾಲಿನ್ಯ ನಿಯಮವನ್ನು ಎತ್ತಿಹಿಡಿದಿದ್ದು, 2005ರ ನಿಯಮವನ್ನು ಪಾಲಿಸುವಂತೆ ಖಡಕ್‌ ಆದೇಶ ನೀಡಿದೆ. ಈ ನಿಯಮದ ಪ್ರಕಾರ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧವಿದ್ದು, ಇದು ಕರಾವಳಿ ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ತೊಂದರೆಯಾಗಿದೆ.

ರಾಜ್ಯದಲ್ಲಿ ಧ್ವನಿವರ್ಧಕ ಬಳಸಲು ಕೆಲವು ನಿಯಮ ವಿಧಿಸಲಾಗಿದೆ. ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಧ್ವನಿವರ್ಧಕ ಬಳಸಬಹುದಾಗಿದೆ. ಕೈಗಾರಿಕಾ ಪ್ರದೇಶದಲ್ಲಿ ಹಗಲಿನಲ್ಲಿ 75 ಡೆಸಿಬಲ್ ಮತ್ತು ರಾತ್ರಿ 10 ಡೆಸಿಬಲ್ ನಷ್ಟು ಬಳಕೆಗೆ ಅವಕಾಶವಿದೆ. ವಾಣಿಜ್ಯ ಪ್ರದೇಶಗಳಲ್ಲಿ ಹಗಲಿನಲ್ಲಿ 65 ಡೆಸಿಬಲ್ ಮತ್ತು ರಾತ್ರಿ 55 ಡೆಸಿಬಲ್ ಮಟ್ಟ ಇರಬೇಕು. ವಸತಿ ವಲಯಗಳಲ್ಲಿ, ಕಟ್ಟಡ ಮಟ್ಟವು ಹಗಲಿನಲ್ಲಿ 55 ಡೆಸಿಬಲ್ ಮತ್ತು ರಾತ್ರಿಯಲ್ಲಿ 45 ಡೆಸಿಬಲ್ ಬಳಸಬಹುದು. ಶಾಂತ ವಲಯದಲ್ಲಿ ಹಗಲಿನಲ್ಲಿ 50 ಡೆಸಿಬಲ್‌ ಮತ್ತು ರಾತ್ರಿ 40 ಡೆಸಿಬಲ್‌ನಷ್ಟು ಶಬ್ಧಕ್ಕೆ ಅನುಮತಿ ನೀಡಲಾಗಿದೆ. ಈ ರೀತಿಯ ನಿಯಮಗಳನ್ನು ಪಾಲಿಸಿಕೊಂಡು ಯಕ್ಷಗಾನ, ಉತ್ಸವ, ಕಂಬಳ ನಡೆಸುವುದು ಕಷ್ಟ ಎನ್ನುತ್ತಾರೆ ಸಂಘಟಕರು.

ಬ್ರಹ್ಮಾವರ : ಇಲಿ ಪಾಷಣ ಸೇವಿಸಿ ಮಹಿಳೆ ಆತ್ಮಹತ್ಯೆ – Vishwanews24

ರಾಜ್ಯ ಸರಕಾರ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ನಿಬಂಧನಗೊಳಪಟ್ಟು ಧ್ವನಿವರ್ಧಕ ಬಳಸುವಂತೆ ಗ್ರೀನ್‌ ಸಿಗ್ನಲ್ ನೀಡಿದೆ. ಆದರೆ ಯಕ್ಷಗಾನ, ಕಂಬಳ, ಜಾತ್ರೆ, ಉತ್ಸವ ಸೀಸನ್‌ ಈ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ಇದಕ್ಕೆ ಸರಕಾರ ಯಾವುದೇ ಮಾರ್ಗಸೂಚಿ ನೀಡದಿರುವುದು ಜಿಲ್ಲಾಡಳಿತಕ್ಕೂ ಬಿಸಿತುಪ್ಪವಾಗಿದೆ. ಈ ಉತ್ಸವಗಳ ಮೇಲೆ ಹೊಡೆತ ಬಿದ್ದರೆ ಕರಾವಳಿಯ ಸಾಂಸ್ಕೃತಿಕ ಟೂರಿಸಂಗೂ ಹಿನ್ನಡೆಯಾಗಲಿದೆ ಎನ್ನುತ್ತಾರೆ ಯಕ್ಷಾಭಿಮಾನಿಗಳು.

ರಾಜ್ಯದಲ್ಲಿ 11,850 ಅರ್ಜಿಗಳು: ರಾಜ್ಯದಲ್ಲಿ ಮಸೀದಿ, ದೇವಾಲಯ, ಚರ್ಚ್ಗಳಿಂದ ಧ್ವನಿವರ್ಧಕ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 11,850 ಅರ್ಜಿಗಳು ಬಂದಿವೆ. ಇದರಲ್ಲಿ 10,889 ಮಸೀದಿಗಳಿಗೆ, 3000ಕ್ಕೂ ಹೆಚ್ಚು ಹಿಂದೂ ದೇವಾಲಯ, 1400ಕ್ಕೂ ಹೆಚ್ಚು ಚರ್ಚ್ಗಳಿಗೆ ಸರಕಾರ 2 ವರ್ಷಗಳವರೆಗೆ ಅನುಮತಿ ನೀಡಿದ್ದು, ಇದಕ್ಕೆ 450ರೂ. ಶುಲ್ಕ ಕಟ್ಟಲು ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್‌ ರೋಹಿತ್‌ ಹೆಗ್ಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ತುಳುನಾಡಿನ ಕಂಬಳ ಈ ನೆಲದ ಸಂಸ್ಕೃತಿಯಾಗಿದ್ದು, ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಿಕೊಂಡೇ ಈ ಕ್ರೀಡೆ ನಡೆಯುತ್ತಿದೆ. ಕಂಬಳ ಕ್ರೀಡೆಗಳು ಸಾಮಾನ್ಯವಾಗಿ ವಸತಿ ಪ್ರದೇಶದಲ್ಲಿ ನಡೆಯದ ಕಾರಣ ಶಬ್ಧಮಾಲಿನ್ಯ ನಿಯಮ ನಮಗೇನು ಸಮಸ್ಯೆಯಾಗಲ್ಲ. ಜಿಲ್ಲಾಧಿಕಾರಿಗಳು ಸಭೆ ಕರೆದಾಗ ಅವರಿಗೆ ಈ ಬಗ್ಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ – Vishwanews24

ಯಕ್ಷಗಾನ, ಕಂಬಳ ಕಲೆಗಳು ಈ ನೆಲದ ಅಸ್ಮಿತೆ ಮತ್ತು ಧಾರ್ಮಿಕ ನಂಬಿಕೆ. ಅದರ ಮೂಲ ಆಶಯಕ್ಕೆ ಹೊಡೆತ ಬೀಳದಂತೆ ಸುಪ್ರೀಂಕೋರ್ಟ್‌ ನಿಯಮವನ್ನು ಪಾಲಿಸಿಕೊಂಡು ಈ ಕಲೆಗಳ ಪ್ರದರ್ಶನಕ್ಕೆ ಅವಕಾಶವಿದೆ. ಈ ಕಲೆಗಳಲ್ಲಿ ಹಿಂದಿನಿಂದ ಬಂದ ಸಂಪ್ರದಾಯವಿದ್ದು, ಅದಕ್ಕೆ ಬದ್ಧರಾಗಿ ನಡೆಯುವ ಉದ್ದೇಶದಿಂದ ಶೀಘ್ರದಲ್ಲೇ ಯಕ್ಷಗಾನ, ಕಂಬಳ ಮುಖ್ಯಸ್ಥರ ಸಭೆ ಕರೆದು ಚರ್ಚಿಸಲಾಗುವುದು ಎಂದು ದ.ಕ. ಡಿಸಿ ರವಿಕುಮಾರ್‌ ಎಂ.ಆರ್‌. ತಿಳಿಸಿದರು.

ಕರಾವಳಿ ಭಾಗದಲ್ಲಿ ಯಕ್ಷಗಾನ, ಕಂಬಳ, ಜಾತ್ರೋತ್ಸವಗಳು ನಡೆಯುವುದೇ ರಾತ್ರಿ ಹೊತ್ತಿನಲ್ಲಿ. ಸುಪ್ರೀಂ ಕೋರ್ಟ್‌ ನಿಯಮ ಈಗ ತೊಡಕಾಗಿದ್ದು, ಈ ಕಲೆಗಳು ಸಾಂಪ್ರದಾಯಿಕವಾಗಿ ನಡೆಯಬೇಕಾದರೆ ಜಿಲ್ಲಾಡಳಿತ ಸಹಕಾರ ಮುಖ್ಯವಾಗಿದೆ. ಕಾಲಮಿತಿ ಯಕ್ಷಗಾನಕ್ಕೆ ನಮ್ಮ ಹಠವಿಲ್ಲ. ಆದರೆ, ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ಆ ಬಗ್ಗೆ ಒಲವು ತೋರಿದ್ದು, ಕನಿಷ್ಠ ರಾತ್ರಿ 12 ಗಂಟೆಯವರೆಗೆ ಪ್ರದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ನೀಡಬೇಕು ಎಂದು ಕಟೀಲು ಮೇಳದ ಕಲ್ಲಾಡಿ ದೇವಿಪ್ರಸಾದ್‌ ಶೆಟ್ಟಿ ಹೇಳಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago