ಮಂಗಳೂರು : ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ – vishwanews24
ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ
ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.
ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.
ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 18 – 19 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ – vishwanews24
