ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಆಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಮಾ.26 ರ ರಾತ್ರಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದರು.
ಭಾಗವತರು ಪದ್ಯ ಹೇಳುತ್ತಾ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣನ ಪಾತ್ರ ಧರಿಸಿದ್ದ ಕಲಾವಿದ ಅಶೋಕ್ ಭಟ್ ಅರ್ಥ ಹೇಳಬೇಕಿತ್ತು. ಈ ವೇಳೆ ಗರಂ ಆದ ಅವರು ಪ್ರೇಕ್ಷಕರಿಗೆ ಬುದ್ಧಿ ಮಾತು ಹೇಳಿದ್ದಾರೆ.
ಇದನ್ನೂ ಓದಿ:
ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೊಂಬರಾಟವೋ? ಇದು ಯಕ್ಷಗಾನವೊ? ಕೋಳಿ ಕಟ್ಟವೋ? ಕಂಬಳವೋ ಎಂದು ವೇದಿಕೆಯಲ್ಲೇ ಪ್ರಶ್ನಿಸಿ ಸಿಟ್ಟು ಹೊರಹಾಕಿದ್ದಾರೆ.
ನಾನು ಚೌಕಿಯಲ್ಲಿದ್ದುಕೊಂಡು ಗಮನಿಸಿದ್ದೇನೆ. ನಾವು ಇಲ್ಲಿ ಯಾಕೆ ಕುಣಿಯುತ್ತಿದ್ದೇವೆ? ಆಟವನ್ನು ಆಡಿಸುವುವವರು ಯಾರು? ಈ ಕ್ಷೇತ್ರದಲ್ಲಿ ನಮ್ಮ ತಿರುಗಾಟ ಎಷ್ಟು ಗೊತ್ತಿದೆಯಾ ನಿಮಗೆ? ಕೋಳಿಕಟ್ಟವಾ ಅಲ್ಲ ಕಂಬಳವಾ? ಯಾರದು? ಏನದು ಶಿಳ್ಳೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಶಿಳ್ಳೆ ಹಾಕಿದ್ದು ಯಾರು? ಹುಚ್ಚರನ್ನು ಬೆಳೆಸಬೇಡಿ. ಕಲಾ ಪ್ರೇಕ್ಷಕರನ್ನು ಬೆಳೆಸಿ. ಆಗದೇ ಇದ್ದರೆ ಬನ್ಸ್ ತಿಂದು ಹೋಗಿ. ಭಾಗವತರ ಕಂಠ ಹಾಳು ಮಾಡುತ್ತೀರಾ? ನಾವು ಯಕ್ಷಗಾನ ಮಾಡಬೇಕೋ? ಏನು ಹೇಳುತ್ತೀರಿ ಎಂದು ಹಿರಿಯರಲ್ಲಿ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:
ಅಶೋಕ್ ಭಟ್ ಅವರ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದಕ್ಕೆ ಪರ, ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಅಶೋಕ್ ಭಟ್ ಅವರನ್ನು ಸಮರ್ಥಿಸಿಕೊಂಡಿದಾರೆ. ಇನ್ನು ಕೆಲವರು ಕಲಾವಿದರು ಮೇಲೆ ಬರಲು ಪ್ರೇಕ್ಷಕರು ಕಾರಣ. ಭಾಗವತರು ಉತ್ತಮ ಪದ್ಯವನ್ನು ಹಾಡಿದಾಗ ಅವರಿಗೆ ಮೆಚ್ಚುಗೆ ಸೂಚಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…