Featured

ಮಂಗಳೂರು: ‘ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ – vishwanews24

ಮಂಗಳೂರು: ‘ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಮಂಗಳೂರು : “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.

ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.

ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.

ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

3 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago