Featured

ಮಂಗಳೂರು: ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ – vishwanews24

ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ದೇವಸ್ಥಾನಗಳ ಹಣ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಟೀಲ್ ಕ್ಷೇತ್ರದಲ್ಲಿ ಸೇವಾ ಶುಲ್ಕ ಏರಿಕೆ ಮಾಡಿರುವ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ. ಅವರು ಸೇವಾ ಶುಲ್ಕ ಏರಿಕೆಗೆ ಸ್ವತಂತ್ರರು. ಇಂತಹ 398 ಸ್ವಾಯತ್ತ ಸಂಸ್ಥೆಗಳು ರಾಜ್ಯದಲ್ಲಿ ಇದೆ. ಕಟೀಲ್ ದೇವಸ್ಥಾನದಲ್ಲಿ ಸೇವಾ ಶುಲ್ಕ ಏರಿಕೆಯ ಬಗ್ಗೆ ಬಿಜೆಪಿ ಸರಕಾರ ವಿರುದ್ಧ ಅಪ್ರಚಾರ ಮಾಡುತ್ತಿದೆ. ಸೇವಾ ಶುಲ್ಕ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ ಎಂದು ಕಟೀಲ್ ದೇವಸ್ಥಾನದ ಆಡಳಿತ ಸಮಿತಿ ಸ್ಪಷ್ಟನೆ ನೀಡಿದೆ ಎಂದರು.

*ಹಸ್ತಕ್ಷೇಪ ಮಾಡುವಂತಿಲ್ಲ : ಕಟೀಲು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದರೂ, ಅಲ್ಲಿಗೆ ಸರಕಾರ ಕಾರ್ಯ ನಿರ್ವಹಣಾಧಿಕಾರಿಯ ನೇಮಕ ಕೂಡಾ ಮಾಡುವಂತಿಲ್ಲ. ಆಡಳಿತ ಸಂಪೂರ್ಣ ದೇವಸ್ಥಾನದ ಮಂಡಳಿಗೆ ಸೇರಿರು ತ್ತದೆ. ಸರಕಾರ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯದ ಆದೇಶವೇ ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.

2003ರಲ್ಲಿ ಧಾರ್ಮಿಕ ಪರಿಷತ್ ಕಾನೂನು ಜಾರಿಗೆ ಬಂದ ಬಳಿಕ ಒಂದು ದೇವಸ್ಥಾನದ ಹಣ ಇನ್ನೊಂದು ದೇವಸ್ಥಾನದ ಅಭಿವೃದ್ಧಿಗೆ ಬಳಸುವಂತಿಲ್ಲ. ಸರಕಾರದ ಖಜಾನೆಗೂ ಹಣ ಬರುವುದಿಲ್ಲ ಎಂದು ಹೇಳಿದರು.

2019ರಿಂದ 2023ರ ವರೆಗಿನ ಬಿಜೆಪಿ ಸರಕಾರದ ಅವಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಿದೆ. ನಮ್ಮ ಸರಕಾರ ಬಂದ ಮೇಲೆ ಕುಕ್ಕೆ ಸುಬ್ರಮಣ್ಯ ಸೇರಿದಂತೆ 14 ದೇವಸ್ಥಾನಗಳ ಆಡಳಿತ ಮಂಡಳಿಯು ಕಾರಣ ಗಳನ್ನು ನೀಡಿ, ದರ ಪರಿಷ್ಕರಣೆ ಮಾಡಿಕೊಡಿ ಎಂದು ಮನವಿ ಮಾಡಿದ್ದು, ಇಲಾಖೆ ಆಯುಕ್ತರು ಒಪ್ಪಿಗೆ ಸೂಚಿಸಿದೆ ಎಂದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

13 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

17 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

17 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

18 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

18 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

19 hours ago