ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ದೇವಸ್ಥಾನಗಳ ಹಣ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.
ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಟೀಲ್ ಕ್ಷೇತ್ರದಲ್ಲಿ ಸೇವಾ ಶುಲ್ಕ ಏರಿಕೆ ಮಾಡಿರುವ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ. ಅವರು ಸೇವಾ ಶುಲ್ಕ ಏರಿಕೆಗೆ ಸ್ವತಂತ್ರರು. ಇಂತಹ 398 ಸ್ವಾಯತ್ತ ಸಂಸ್ಥೆಗಳು ರಾಜ್ಯದಲ್ಲಿ ಇದೆ. ಕಟೀಲ್ ದೇವಸ್ಥಾನದಲ್ಲಿ ಸೇವಾ ಶುಲ್ಕ ಏರಿಕೆಯ ಬಗ್ಗೆ ಬಿಜೆಪಿ ಸರಕಾರ ವಿರುದ್ಧ ಅಪ್ರಚಾರ ಮಾಡುತ್ತಿದೆ. ಸೇವಾ ಶುಲ್ಕ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ ಎಂದು ಕಟೀಲ್ ದೇವಸ್ಥಾನದ ಆಡಳಿತ ಸಮಿತಿ ಸ್ಪಷ್ಟನೆ ನೀಡಿದೆ ಎಂದರು.
*ಹಸ್ತಕ್ಷೇಪ ಮಾಡುವಂತಿಲ್ಲ : ಕಟೀಲು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದರೂ, ಅಲ್ಲಿಗೆ ಸರಕಾರ ಕಾರ್ಯ ನಿರ್ವಹಣಾಧಿಕಾರಿಯ ನೇಮಕ ಕೂಡಾ ಮಾಡುವಂತಿಲ್ಲ. ಆಡಳಿತ ಸಂಪೂರ್ಣ ದೇವಸ್ಥಾನದ ಮಂಡಳಿಗೆ ಸೇರಿರು ತ್ತದೆ. ಸರಕಾರ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯದ ಆದೇಶವೇ ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.
2003ರಲ್ಲಿ ಧಾರ್ಮಿಕ ಪರಿಷತ್ ಕಾನೂನು ಜಾರಿಗೆ ಬಂದ ಬಳಿಕ ಒಂದು ದೇವಸ್ಥಾನದ ಹಣ ಇನ್ನೊಂದು ದೇವಸ್ಥಾನದ ಅಭಿವೃದ್ಧಿಗೆ ಬಳಸುವಂತಿಲ್ಲ. ಸರಕಾರದ ಖಜಾನೆಗೂ ಹಣ ಬರುವುದಿಲ್ಲ ಎಂದು ಹೇಳಿದರು.
2019ರಿಂದ 2023ರ ವರೆಗಿನ ಬಿಜೆಪಿ ಸರಕಾರದ ಅವಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಿದೆ. ನಮ್ಮ ಸರಕಾರ ಬಂದ ಮೇಲೆ ಕುಕ್ಕೆ ಸುಬ್ರಮಣ್ಯ ಸೇರಿದಂತೆ 14 ದೇವಸ್ಥಾನಗಳ ಆಡಳಿತ ಮಂಡಳಿಯು ಕಾರಣ ಗಳನ್ನು ನೀಡಿ, ದರ ಪರಿಷ್ಕರಣೆ ಮಾಡಿಕೊಡಿ ಎಂದು ಮನವಿ ಮಾಡಿದ್ದು, ಇಲಾಖೆ ಆಯುಕ್ತರು ಒಪ್ಪಿಗೆ ಸೂಚಿಸಿದೆ ಎಂದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…