ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ದೇವಸ್ಥಾನಗಳ ಹಣ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.
ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಟೀಲ್ ಕ್ಷೇತ್ರದಲ್ಲಿ ಸೇವಾ ಶುಲ್ಕ ಏರಿಕೆ ಮಾಡಿರುವ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ. ಅವರು ಸೇವಾ ಶುಲ್ಕ ಏರಿಕೆಗೆ ಸ್ವತಂತ್ರರು. ಇಂತಹ 398 ಸ್ವಾಯತ್ತ ಸಂಸ್ಥೆಗಳು ರಾಜ್ಯದಲ್ಲಿ ಇದೆ. ಕಟೀಲ್ ದೇವಸ್ಥಾನದಲ್ಲಿ ಸೇವಾ ಶುಲ್ಕ ಏರಿಕೆಯ ಬಗ್ಗೆ ಬಿಜೆಪಿ ಸರಕಾರ ವಿರುದ್ಧ ಅಪ್ರಚಾರ ಮಾಡುತ್ತಿದೆ. ಸೇವಾ ಶುಲ್ಕ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ ಎಂದು ಕಟೀಲ್ ದೇವಸ್ಥಾನದ ಆಡಳಿತ ಸಮಿತಿ ಸ್ಪಷ್ಟನೆ ನೀಡಿದೆ ಎಂದರು.
*ಹಸ್ತಕ್ಷೇಪ ಮಾಡುವಂತಿಲ್ಲ : ಕಟೀಲು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದರೂ, ಅಲ್ಲಿಗೆ ಸರಕಾರ ಕಾರ್ಯ ನಿರ್ವಹಣಾಧಿಕಾರಿಯ ನೇಮಕ ಕೂಡಾ ಮಾಡುವಂತಿಲ್ಲ. ಆಡಳಿತ ಸಂಪೂರ್ಣ ದೇವಸ್ಥಾನದ ಮಂಡಳಿಗೆ ಸೇರಿರು ತ್ತದೆ. ಸರಕಾರ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯದ ಆದೇಶವೇ ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.
2003ರಲ್ಲಿ ಧಾರ್ಮಿಕ ಪರಿಷತ್ ಕಾನೂನು ಜಾರಿಗೆ ಬಂದ ಬಳಿಕ ಒಂದು ದೇವಸ್ಥಾನದ ಹಣ ಇನ್ನೊಂದು ದೇವಸ್ಥಾನದ ಅಭಿವೃದ್ಧಿಗೆ ಬಳಸುವಂತಿಲ್ಲ. ಸರಕಾರದ ಖಜಾನೆಗೂ ಹಣ ಬರುವುದಿಲ್ಲ ಎಂದು ಹೇಳಿದರು.
2019ರಿಂದ 2023ರ ವರೆಗಿನ ಬಿಜೆಪಿ ಸರಕಾರದ ಅವಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಿದೆ. ನಮ್ಮ ಸರಕಾರ ಬಂದ ಮೇಲೆ ಕುಕ್ಕೆ ಸುಬ್ರಮಣ್ಯ ಸೇರಿದಂತೆ 14 ದೇವಸ್ಥಾನಗಳ ಆಡಳಿತ ಮಂಡಳಿಯು ಕಾರಣ ಗಳನ್ನು ನೀಡಿ, ದರ ಪರಿಷ್ಕರಣೆ ಮಾಡಿಕೊಡಿ ಎಂದು ಮನವಿ ಮಾಡಿದ್ದು, ಇಲಾಖೆ ಆಯುಕ್ತರು ಒಪ್ಪಿಗೆ ಸೂಚಿಸಿದೆ ಎಂದರು.
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…