ಮಂಗಳೂರು : ಯುವಕನೊಬ್ಬ ಮದುವೆ ಮಂತ್ರಣ ಪತ್ರಿಕೆಯನ್ನು ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ನೀಡಲು ಇದೆ ಎಂದು ಮನೆಯಿಂದ ಹೋದವ ಕಾಣೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಾಣೆಯಾದ ಯುವಕನನ್ನು ರಕ್ಷಣ್ ಜೆ.ಕೆ (32) ಎಂದು ಗುರುತಿಸಲಾಗಿದೆ. ಡಿಸೆಂಬರ್ 6 ರಂದು ತನ್ನ ತಾಯಿಯ ಕಾರಿನಲ್ಲಿ ಹೊರಟು ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಆಮಂತ್ರಣ ಪತ್ರ ನೀಡಿ ಬರುತ್ತೇನೆಂದು ಹೇಳಿ ಹೋದವರು ಕಾಣೆಯಾಗಿರುವ ಬಗ್ಗೆ ಪ್ರಕರಣ ದಕ್ಷಿಣ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ. ಡಿಸೆಂಬರ್ 6 ರಂದು ರಾತ್ರಿ 10:30 ಗಂಟೆಗೆ ನಗರದ ಟೌನ್ಹಾಲ್ ಬಳಿ ಕಾರು ಪತ್ತೆಯಾಗಿರುತ್ತದೆ.
ಕಾಣೆಯಾದವರ ಚಹರೆ: 5.8 ಅಡಿ ಎತ್ತರ, ಸಧೃಡ ಶರೀರ, ಗೋಧಿ ಮೈ ಬಣ್ಣ, ಕಪ್ಪು ಕೂದಲು, ತಿಳಿ ನೀಲಿ ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ತುಳು ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.
ಯುವಕ ತನಗೆ ಮದುವೆ ಇಷ್ಟವಿಲ್ಲ ಎಂದು ಮನೆಯವರ ಬಳಿ ಹೇಳಿದ್ದರೂ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಶನಿವಾರ ಮನೆಯಿಂದ ತೆರಳಿದ್ದ ಅವರು ಮಧ್ಯಾಹ್ನದ ರೈಲಿನಲ್ಲಿ ಚೆನ್ನೈಗೆ ಹೋಗಿದ್ದಾರೆ. ಸೋಮವಾರ ಮೊಬೈಲ್ ಕರೆ ಸ್ವೀಕರಿಸಿದ್ದು, ತಾನು ಚೆನ್ನೈಯಲ್ಲಿರುವುದಾಗಿ ಮನೆಯವರಿಗೆ ತಿಳಿಸಿದ್ದಾರೆ. ಕೂಡಲೇ ಪೊಲೀಸರು ಲೋಕೇಷನ್ ಸರ್ಚ್ ಮಾಡಿದಾಗ ಚೆನ್ನೈಯಲ್ಲಿರುವುದು ದೃಢಪಟ್ಟಿದೆ. ಮರಳಿ ಮಂಗಳೂರಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…