ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ

ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ಪ್ರಸಕ್ತ ಸಾಲಿನ ‘ವಿಶುಕುಮಾರ್ ಪ್ರಶಸ್ತಿ’ಗೆ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ.

ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್ ಸ್ಮರಣಾರ್ಥ ಯುವವಾಹಿನಿ ಸಂಸ್ಥೆಯು ಕಳೆದ 20 ವರ್ಷಗಳಿಂದ “ವಿಶುಕುಮಾರ್ ಪ್ರಶಸ್ತಿ” ನೀಡುತ್ತಾ ಬಂದಿದೆ. ಈ ಸಾಲಿನ ಪ್ರಶಸ್ತಿಗೆ ಬಿ.ಎಂ. ರೋಹಿಣಿ, ಮುದ್ದು ಮೂಡುಬೆಳ್ಳೆ, ಡಾ| ಪ್ರಭಾಕರ ನೀರುಮಾರ್ಗ, ಡಾ| ಯೋಗೀಶ್ ಕೈರೋಡಿ, ಪ್ರೊ. ಶಶಿಲೇಖಾ ಅವರನ್ನೊಳಗೊಂಡ ಆಯ್ಕೆ ಸಮಿತಿ ಆಯ್ಕೆಯನ್ನು ನಡೆಸಿದೆ.

ನವೆಂಬರ್ 10ರಂದು ಉರ್ವ ಸ್ಟೋರ್ ನ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಯುವವಾಹಿನಿ ಸಂಸ್ಥೆಯ ವಿಶುಕುಮಾರ್ ದತ್ತಿ ನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಹಾಗೂ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ರೈಲಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು – vishwanews24

 

Leave a Reply