ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ಪ್ರಸಕ್ತ ಸಾಲಿನ ‘ವಿಶುಕುಮಾರ್ ಪ್ರಶಸ್ತಿ’ಗೆ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ.
ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್ ಸ್ಮರಣಾರ್ಥ ಯುವವಾಹಿನಿ ಸಂಸ್ಥೆಯು ಕಳೆದ 20 ವರ್ಷಗಳಿಂದ “ವಿಶುಕುಮಾರ್ ಪ್ರಶಸ್ತಿ” ನೀಡುತ್ತಾ ಬಂದಿದೆ. ಈ ಸಾಲಿನ ಪ್ರಶಸ್ತಿಗೆ ಬಿ.ಎಂ. ರೋಹಿಣಿ, ಮುದ್ದು ಮೂಡುಬೆಳ್ಳೆ, ಡಾ| ಪ್ರಭಾಕರ ನೀರುಮಾರ್ಗ, ಡಾ| ಯೋಗೀಶ್ ಕೈರೋಡಿ, ಪ್ರೊ. ಶಶಿಲೇಖಾ ಅವರನ್ನೊಳಗೊಂಡ ಆಯ್ಕೆ ಸಮಿತಿ ಆಯ್ಕೆಯನ್ನು ನಡೆಸಿದೆ.
ನವೆಂಬರ್ 10ರಂದು ಉರ್ವ ಸ್ಟೋರ್ ನ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಯುವವಾಹಿನಿ ಸಂಸ್ಥೆಯ ವಿಶುಕುಮಾರ್ ದತ್ತಿ ನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಹಾಗೂ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…