Featured

ಮಂಗಳೂರು: ಯೆನೆಪೋಯ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಜೀವನ್ ರಾಜ್‍ಗೆ ಪಿಎಚ್‍ಡಿ ಪದವಿ -Vishwanews24

ಮಂಗಳೂರು: ಯೆನೆಪೋಯ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಜೀವನ್ ರಾಜ್‍ಗೆ ಪಿಎಚ್‍ಡಿ ಪದವಿ -Vishwanews24

ಮಂಗಳೂರು: ಯೆನೆಪೋಯ (ಡಿಮ್ಡ್ ಟು ಬಿ ಯುವರ್ಸಿಟಿ)ಯ, ದಿ ಯೇನಪೋಯ ಇನ್ಸ್ಟಿಟ್ಯೂಟ್ ಆಫ್ ಆಟ್ರ್ಸ್, ಸೈನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ ಅಸಿಸ್ಟೆಂಟ್ ಪ್ರೋಫೆಸರ್ ಹಾಗೂ ಅಸಿಸ್ಟೆಂಟ್ ಕಂಟ್ರೋಲರ್ ಆಫ್ ಎಗ್ಸಾಮಿನೇಶನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೀವನ್ ರಾಜ್ ಹಂಪಿ ವಿಶ್ವ ವಿದ್ಯಾನಿಲಯದಿಂದ “ಹೊಸ ಆರ್ಥಿಕ ನೀತಿ ಮತ್ತು ಶೈಕ್ಷಣಿಕ ವಲಯ: ದಕ್ಷಿಣ ಕನ್ನಡ ಜಿಲ್ಲೆಯನ್ನು ಅನುಲಕ್ಷಿಸಿ ಒಂದು ಅಧ್ಯಯನ”. (New Economic Policy and Education Sector: A study with Reference to Dakshina Kannada District) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಪ್ರಾಧ್ಯಾಪಕರಾಗಿ 11 ವರ್ಷಗಳ ಅನುಭವವುಳ್ಳ ಇವರು ಹಿಂದೆ ಸಂತ ಅಲೋಶಿಯಸ್ ಮತ್ತು ಕಣಚೂರು ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ ಸೇವೆಸಲ್ಲಿಸಿದ್ದಾರೆ. ಇವರು ಎಂ.ಕಾಂ ಪದವಿಯನ್ನು ಸೈಂಟ್ ಅಲೋಶಿಯಸ್ ಕಾಲೇಜ್ ನಲ್ಲಿ ಪಡೆದಿದ್ದಾರೆ. ಮಾತ್ರವಲ್ಲದೆ ಯೆನೆಪೋಯ ವಿವಿಯ “ಉತ್ತಮ ಶಿಕ್ಷಕ -2019” ಎಂಬ ಪ್ರಶಸ್ತಿಯನ್ನೂ ಪಡೆದಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ನಾಯಕರಾಗಿ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.

ಉಡುಪಿ : ಪೊಲೀಸ್ ಸೇವೆ ಎನ್ನುವುದು ಒಂದು ಅತ್ಯುನ್ನತ ಸೇವೆಯಾಗಿದ್ದು ರಾಷ್ಟ್ರ ಕಟ್ಟುವ ಕಾಯಕದಲ್ಲಿ ಕೈಜೋಡಿಸುವ ಪೊಲೀಸರಿಗೆ ಅಭಿನಂದನೆಗಳು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಸರ್ಕಾರಿ ಶಾಲೆ ಉಳಿಸಿ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಇವರು ಅನೇಕ ಸಾಮಾಜಿಕ ಮತ್ತು ಸಾಹಿತ್ಯ ಸೇವೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾರೆ. ಸೌಹಾರ್ದ ಕಲಾವಿದರು ಕುತ್ತಾರ್ ಇಲ್ಲಿ ಸಾಂಸ್ಕೃತಿಕ ಚಟುವಟಿಕೆ ಆರಂಭಿಸಿದ ಅವರು, ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮಾತ್ರವಲ್ಲದೆ ಮುನ್ನೂರು ಗ್ರಾಮದ ಹೆಸರಾಂತ ಸಂಸ್ಥೆ ಹನುಮಾನ್ ಕ್ರೀಡಾಮಂಡಳಿಯ ಸದಸ್ಯರು ಆಗಿದ್ದಾರೆ.

ಸದ್ಯ ಅಭಿಮತ ಮಂಗಳೂರು ಇದರ ಮುಖ್ಯ ಸಂಘಟಕರಾಗಿರುವ ಜೀವನ್ ರಾಜ್ ಕುತ್ತಾರ್ ಸಾಹಿತ್ಯ ಸಂಘಟನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ. ಜನರಿಗಾಗಿ ಸಾಹಿತ್ಯ ಎಂಬ ನಿಲುವಿನೊಂದಿಗೆ ನಡೆಯುತ್ತಿರುವ “ಜನನುಡಿ” ಸಂಘಟಕರಲ್ಲಿ ಜೀವನ್ ರಾಜ್ ಕೂಡಾ ಒಬ್ಬರು. ಸಾಹಿತ್ಯ, ಸಾಂಸ್ಕೃತಿಕ, ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಜೀವನ್ ರಾಜ್, ಹಂಪಿ ವಿವಿಯಿಂದ ಪಿಎಚ್‍ಡಿ ಪದವಿ ಪಡೆದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕ್ಷೇತ್ರದ ಹಲವರು ಅಭಿನಂದಿಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

21 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

22 hours ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

2 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

2 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 days ago