ಮಂಗಳೂರು : ಯೋಧರ ಹೆಸರು ಹೇಳಿಕೊಂಡು ಆನ್ ಲೈನ್ ವಂಚನೆ ನಡೆಸುತ್ತಿರುವ ಜಾಲವೊಂದು ಮಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಕಾರ್ಯಾಚರಿಸುತ್ತಿದೆ.
ಕಾಲ್ ಸೆಂಟರ್ ಮಾದರಿಯಲ್ಲಿ ಈ ತಂಡ ಕಾರ್ಯಾಚರಿಸುತ್ತಿದೆ. ಒಎಲ್ಎಕ್ಸ್ ಸೇರಿದಂತೆ ಇನ್ನಿತರ ಮಾರಾಟ ಜಾಲಗಳಲ್ಲಿ ವಾಹನ ಮಾರಾಟಕ್ಕಿದೆ ಎಂದು ಜಾಹೀರಾತಿನ ಜೊತೆಗೆ ಮೊಬೈಲ್ ನಂಬರ್ ನಮೂದಿಸಿಕೊಂಡಿರುವ ಈ ಜಾಲ ಗ್ರಾಹಕರನ್ನು ವಂಚಿಸುತ್ತಿರುವುದು ತಿಳಿದುಬಂದಿದೆ.
ಜಾಹೀರಾತಿನಲ್ಲಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾರಾಟಕ್ಕಿರುವ ವಾಹನದ ಬಗ್ಗೆ ವಿಚಾರಿಸುವ ಸಂದರ್ಭದಲ್ಲಿ ಕರೆ ಸ್ವೀಕರಿಸುವ ವ್ಯಕ್ತಿ ತಾನು ಮಂಗಳೂರು, ಬೆಂಗಳೂರು, ಮುಂಬೈ ಹೀಗೆ ಎಲ್ಲಾ ವಿಮಾನ ನಿಲ್ದಾಣಗಳ ಹೆಸರು ಹೇಳಿ, ತಾನು ಸಿ.ಐ.ಎಸ್.ಎಫ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿ ನಂಬಿಸುತ್ತಾ, ತನಗೆ ಬೇರೆಡೆಗೆ ವರ್ಗಾವಣೆಯಾಗಿರುವ ಕಾರಣಕ್ಕೆ ವಾಹನ ಮಾರುತ್ತಿರುವುದಾಗಿ ಹೇಳುತ್ತಾನೆ. ಕೇಳಿದ ತಕ್ಷಣವೇ ವಾಹನದ ಆರ್.ಸಿ, ಫೋಟೋ ಜೊತೆಗೆ ಭಾರತ ಸರಕಾರದ ಲಾಂಛನವಿರುವ ನಕಲಿ ಸೈನಿಕ ಗುರುತು ಪತ್ರವನ್ನೂ ಕಳುಹಿಸುತ್ತಾನೆ.
ಈ ಗುರುತಿನ ಪತ್ರ ನಿಜವಾಗಿಯೂ ಯಾವುದೋ ಸೈನಿಕನಿಗೆ ಸೇರಿದ್ದೋ, ಅಥವಾ ಸೈನಿಕನ ನಕಲಿ ಗುರುತಿನ ಚೀಟಿ ತಯಾರಿಸಿ ಬೇರೆ ಯಾರದೋ ಚಿತ್ರ ಅಂಟಿಸಿ ಮಾಡಿರುವುದೋ ಎನ್ನುವುದು ತಿಳಿಯದಾಗಿದೆ.
ಗ್ರಾಹಕನನ್ನು ಆತನ ಹತ್ತಿರದ ವಿಮಾನ ನಿಲ್ದಾಣಕ್ಕೆ ಬರಹೇಳಿ, ಮಾರಾಟ ಮಾಡುವ ವಾಹನವನ್ನು ಅಲ್ಲೇ ನೀಡುವುದಾಗಿ ಭರವಸೆಯನ್ನೂ ಮೂಡಿಸುತ್ತಾನೆ. ಅಲ್ಲದೆ ವಾಹನ ನೋಡುವ ಮೊದಲು ವಿಮಾನ ನಿಲ್ದಾಣದಿಂದ ಹೊರಬರುವ ಚೆಕ್ಕಿಂಗ್ ಹಣ 2000/ ರೂಪಾಯಿಯನ್ನು ಗೂಗಲ್ ಪೇ ಮೂಲಕ ಕಳುಹಿಸುವಂತೆ ನಂಬಿಸುತ್ತಾನೆ. ಸೈನಿಕನ ಗುರುತಿನ ಚೀಟಿ ಕಂಡ ತಕ್ಷಣ ಪ್ರಾಮಾಣಿಕನಾಗಿರಬೇಕು ಎನ್ನುವ ಕಾರಣಕ್ಕೆ ಕೆಲವರು ಈ ವಂಚಕರಿಗೆ ಹಣ ವರ್ಗಾಯಿಸಿದ್ದಾರೆ.
ದಿನಕ್ಕೆ ನೂರಕ್ಕೂ ಮಿಕ್ಕಿದ ಜನರಿಗೆ ವಂಚನೆ ನಡೆಸುತ್ತಿರುವ ಈ ಬೃಹತ್ ಜಾಲ,ತನ್ನ ವಂಚನೆಗಾಗಿ ದೇಶದ ಹೆಮ್ಮೆಯ ಸೈನಿಕರ ಹೆಸರನ್ನು ಬಳಸುತ್ತಿದ್ದಾರೆ. ಭಾರತೀಯ ಸೇನೆಯ ನಕಲಿ ಗುರುತಿನ ಚೀಟಿ ಈ ವಂಚಕರಿಗೆ ಸಿಗುತ್ತಿರುವುದು ಗಂಭೀರ ವಿಷಯವಾಗಿದ್ದು, ಉಗ್ರಗಾಮಿಗಳಿಗೂ ಇದನ್ನು ಉಪಯೋಗಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಸೂಕ್ತ ಗಮನಹರಿಸಿ ಈ ವಂಚನೆ ಜಾಲವನ್ನು ಭೇಧಿಸಬೇಕಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…