Featured

ಮಂಗಳೂರು :ಯೋಧರ ಹೆಸರು ಹೇಳಿಕೊಂಡು ನಕಲಿ ಗುರತಿನ ಚೀಟಿ ಉಪಯೋಗಿಸಿ ಆನ್ ಲೈನ್ ವಂಚನೆ -Vishwanews24

ಮಂಗಳೂರು : ಯೋಧರ ಹೆಸರು ಹೇಳಿಕೊಂಡು ಆನ್ ಲೈನ್ ವಂಚನೆ ನಡೆಸುತ್ತಿರುವ ಜಾಲವೊಂದು ಮಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಕಾರ್ಯಾಚರಿಸುತ್ತಿದೆ.

ಕಾಲ್ ಸೆಂಟರ್ ಮಾದರಿಯಲ್ಲಿ ಈ ತಂಡ ಕಾರ್ಯಾಚರಿಸುತ್ತಿದೆ. ಒಎಲ್ಎಕ್ಸ್ ಸೇರಿದಂತೆ ಇನ್ನಿತರ ಮಾರಾಟ ಜಾಲಗಳಲ್ಲಿ ವಾಹನ ಮಾರಾಟಕ್ಕಿದೆ ಎಂದು ಜಾಹೀರಾತಿನ ಜೊತೆಗೆ ಮೊಬೈಲ್ ನಂಬರ್ ನಮೂದಿಸಿಕೊಂಡಿರುವ ಈ‌ ಜಾಲ ಗ್ರಾಹಕರನ್ನು ವಂಚಿಸುತ್ತಿರುವುದು ತಿಳಿದುಬಂದಿದೆ.

ಜಾಹೀರಾತಿನಲ್ಲಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾರಾಟಕ್ಕಿರುವ ವಾಹನದ ಬಗ್ಗೆ ವಿಚಾರಿಸುವ ಸಂದರ್ಭದಲ್ಲಿ ಕರೆ ಸ್ವೀಕರಿಸುವ ವ್ಯಕ್ತಿ ತಾನು ಮಂಗಳೂರು, ಬೆಂಗಳೂರು, ಮುಂಬೈ ಹೀಗೆ ಎಲ್ಲಾ ವಿಮಾನ ನಿಲ್ದಾಣಗಳ ಹೆಸರು ಹೇಳಿ, ತಾನು ಸಿ.ಐ.ಎಸ್.ಎಫ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿ‌ ನಂಬಿಸುತ್ತಾ, ತನಗೆ ಬೇರೆಡೆಗೆ ವರ್ಗಾವಣೆಯಾಗಿರುವ ಕಾರಣಕ್ಕೆ ವಾಹನ ಮಾರುತ್ತಿರುವುದಾಗಿ ಹೇಳುತ್ತಾನೆ. ಕೇಳಿದ ತಕ್ಷಣವೇ ವಾಹನದ ಆರ್.ಸಿ, ಫೋಟೋ ಜೊತೆಗೆ ಭಾರತ ಸರಕಾರದ ಲಾಂಛನವಿರುವ ನಕಲಿ ಸೈನಿಕ ಗುರುತು ಪತ್ರವನ್ನೂ ಕಳುಹಿಸುತ್ತಾನೆ.

ಈ ಗುರುತಿನ ಪತ್ರ ನಿಜವಾಗಿಯೂ ಯಾವುದೋ ಸೈನಿಕನಿಗೆ ಸೇರಿದ್ದೋ, ಅಥವಾ ಸೈನಿಕನ ನಕಲಿ ಗುರುತಿನ ಚೀಟಿ ತಯಾರಿಸಿ ಬೇರೆ ಯಾರದೋ ಚಿತ್ರ ಅಂಟಿಸಿ ಮಾಡಿರುವುದೋ ಎನ್ನುವುದು ತಿಳಿಯದಾಗಿದೆ.

ಗ್ರಾಹಕನನ್ನು ಆತನ ಹತ್ತಿರದ ವಿಮಾನ ನಿಲ್ದಾಣಕ್ಕೆ ಬರಹೇಳಿ, ಮಾರಾಟ ಮಾಡುವ ವಾಹನವನ್ನು ಅಲ್ಲೇ ನೀಡುವುದಾಗಿ ಭರವಸೆಯನ್ನೂ ಮೂಡಿಸುತ್ತಾನೆ. ಅಲ್ಲದೆ ವಾಹನ ನೋಡುವ ಮೊದಲು ವಿಮಾನ ನಿಲ್ದಾಣದಿಂದ ಹೊರ‌ಬರುವ ಚೆಕ್ಕಿಂಗ್ ಹಣ 2000/ ರೂಪಾಯಿಯನ್ನು ಗೂಗಲ್ ಪೇ ಮೂಲಕ ಕಳುಹಿಸುವಂತೆ ನಂಬಿಸುತ್ತಾನೆ. ಸೈನಿಕನ ಗುರುತಿನ ಚೀಟಿ‌ ಕಂಡ ತಕ್ಷಣ ಪ್ರಾಮಾಣಿಕನಾಗಿರಬೇಕು ಎನ್ನುವ ಕಾರಣಕ್ಕೆ ಕೆಲವರು ಈ ವಂಚಕರಿಗೆ ಹಣ ವರ್ಗಾಯಿಸಿದ್ದಾರೆ.

ದಿನಕ್ಕೆ ನೂರಕ್ಕೂ‌ ಮಿಕ್ಕಿದ ಜನರಿಗೆ ವಂಚನೆ ನಡೆಸುತ್ತಿರುವ ಈ ಬೃಹತ್ ಜಾಲ,ತನ್ನ ವಂಚನೆಗಾಗಿ ದೇಶದ ಹೆಮ್ಮೆಯ ಸೈನಿಕರ ಹೆಸರನ್ನು ಬಳಸುತ್ತಿದ್ದಾರೆ. ಭಾರತೀಯ ಸೇನೆಯ ನಕಲಿ‌ ಗುರುತಿನ ಚೀಟಿ ಈ ವಂಚಕರಿಗೆ ಸಿಗುತ್ತಿರುವುದು ಗಂಭೀರ ವಿಷಯವಾಗಿದ್ದು, ಉಗ್ರಗಾಮಿಗಳಿಗೂ ಇದನ್ನು ಉಪಯೋಗಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಸೂಕ್ತ‌ ಗಮನಹರಿಸಿ ಈ‌ ವಂಚನೆ ಜಾಲವನ್ನು ಭೇಧಿಸಬೇಕಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago