ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ಕ್ಯಾ. ಚೌಟ ಕೂಡಾ ಒಬ್ಬರು.
ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯೂ ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಸೂಕ್ತ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ “ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ” ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…