ಮಂಗಳೂರು,: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ದುಬೈಯಿಂದ ಬಂದಿಳಿದ ವಿಮಾನ ರನ್ ವೇಯಿಂದ ಜಾರಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಲೋಪದ ಕುರಿತು ಹಾಗು ಘಟನೆಯ ಸಮಗ್ರ ಉನ್ನತ ತನಿಖೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.
ಈ ಸಂಬಂಧ ನಾಗರೀಕ ವಿಮಾನಯಾನ ಮಹಾ ನಿರ್ದೇಶಕ (ಡಿಜಿಸಿಎ)ರೊಂದಿಗೆ ಹಾಗೂ ಸಚಿವಾಲಯದೊಂದಿಗೆ ಮಾತನಾಡಿರುವ ಸಚಿವರು, ಈ ಘಟನೆ ಪೈಲಟ್ ಅಥವಾ ವಿಮಾನದ ದೋಷದಿಂದಾಗಿದೆಯೇ, ಏರ್ ಪೋರ್ಟ್ ವ್ಯವಸ್ಥೆಯಲ್ಲಿ ಏನಾದರೂ ಕೊರತೆಯುಂಟಾಗಿದೆಯೇ ಎಂಬುದರ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕು. ಪ್ರಯಾಣಿಕರ ಸುರಕ್ಷಿತ ಪ್ರಯಾಣಕ್ಕೆ ಉತ್ಕೃಷ್ಟ ಕಾಳಜಿ ವಹಿಸಬೇಕು, ಕೂಡಲೇ ಈ ಬಗ್ಗೆ ಸ್ಪಂದಿಸಬೇಕು ಎಂದು ಸಚಿವ ಖಾದರ್ ಆಗ್ರಹಿಸಿದ್ದಾರೆ.
ದುಬೈನಿಂದ ಮಂಗಳೂರಿಗೆ ಸುಮಾರು 6 ಗಂಟೆಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 814 ವಿಮಾನ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಸಂದರ್ಭ ರನ್ ವೇ ಬಿಟ್ಟು ಹೊರಗೆ ಜಾರಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…