ಮಂಗಳೂರು: ದಕ್ಷಿಣ ಕನ್ನಡ ಕಡಬ ತಾಲೂಕಿನ ಎಡಮಂಗಲದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಎದೆಗೆ ಕತ್ತಿ ತಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು.
ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಬೀಳುವಾಗ ಕೈಯಲ್ಲಿದ್ದ ಹರಿತವಾದ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿದೆ. ಕತ್ತಿ ನುಗ್ಗಿದ ರಭಸಕ್ಕೆ ಕತ್ತಿಯ ಕೈ ಹಿಡಿಯುವ ಜಾಗ ತುಂಡಾಗಿದೆ.
ಗೀತಾ ಅವರು ಕೂಗಿದಾಗ ಗಂಡ ಓಡಿ ಬಂದಿದ್ದು ಕೈ ಭಾಷೆಯಲ್ಲೇ ಕತ್ತಿ ನುಗ್ಗಿದ ಜಾಗ ತೋರಿಸಿದರು ಎನ್ನಲಾಗಿದೆ. ಗಂಡ ಕತ್ತಿಯನ್ನು ಎಳೆದು ತೆಗೆದಾಗ ಗೀತಾ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೃತ ಗೀತಾ ಅವರಿಗೆ 8 ನೇ ತರಗತಿ ಓದುತ್ತಿರುವ ಪುತ್ರ ಹಾಗೂ ಪುತ್ರಿ ಎಲ್.ಕೆ.ಜಿ ಅಭ್ಯಾಸ ನಡೆಸುತ್ತಿದ್ದಾರೆ. ಈ ಕುರಿತು ಮೃತರ ಗಂಡ ಶಿವರಾಮ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…