Featured

ಮಂಗಳೂರು : ರಬ್ಬರ್‌ ಟ್ಯಾಪಿಂಗ್‌ ವೇಳೆ ಎದೆಗೆ ಕತ್ತಿತಾಗಿ ಮಹಿಳೆ ಸಾವು – Vishwanews24

ಮಂಗಳೂರು : ರಬ್ಬರ್‌ ಟ್ಯಾಪಿಂಗ್‌ ವೇಳೆ ಎದೆಗೆ ಕತ್ತಿತಾಗಿ ಮಹಿಳೆ ಸಾವು

ಮಂಗಳೂರು: ದಕ್ಷಿಣ ಕನ್ನಡ ಕಡಬ ತಾಲೂಕಿನ ಎಡಮಂಗಲದಲ್ಲಿ ರಬ್ಬರ್‌ ಟ್ಯಾಪಿಂಗ್‌ ಮಾಡುವ ವೇಳೆ ಎದೆಗೆ ಕತ್ತಿ ತಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು.

ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಬೀಳುವಾಗ ಕೈಯಲ್ಲಿದ್ದ ಹರಿತವಾದ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿದೆ. ಕತ್ತಿ ನುಗ್ಗಿದ ರಭಸಕ್ಕೆ ಕತ್ತಿಯ ಕೈ ಹಿಡಿಯುವ ಜಾಗ ತುಂಡಾಗಿದೆ.

ಗೀತಾ ಅವರು ಕೂಗಿದಾಗ ಗಂಡ ಓಡಿ ಬಂದಿದ್ದು ಕೈ ಭಾಷೆಯಲ್ಲೇ ಕತ್ತಿ ನುಗ್ಗಿದ ಜಾಗ ತೋರಿಸಿದರು ಎನ್ನಲಾಗಿದೆ. ಗಂಡ ಕತ್ತಿಯನ್ನು ಎಳೆದು ತೆಗೆದಾಗ ಗೀತಾ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೃತ ಗೀತಾ ಅವರಿಗೆ 8 ನೇ ತರಗತಿ ಓದುತ್ತಿರುವ ಪುತ್ರ ಹಾಗೂ ಪುತ್ರಿ ಎಲ್.ಕೆ.ಜಿ ಅಭ್ಯಾಸ ನಡೆಸುತ್ತಿದ್ದಾರೆ. ಈ ಕುರಿತು ಮೃತರ ಗಂಡ ಶಿವರಾಮ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Vishwa News 24

Recent Posts

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

7 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

15 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

22 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

35 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

47 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

59 minutes ago