ಮಂಗಳೂರು: ದಕ್ಷಿಣ ಕನ್ನಡ ಕಡಬ ತಾಲೂಕಿನ ಎಡಮಂಗಲದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಎದೆಗೆ ಕತ್ತಿ ತಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು.
ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಬೀಳುವಾಗ ಕೈಯಲ್ಲಿದ್ದ ಹರಿತವಾದ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿದೆ. ಕತ್ತಿ ನುಗ್ಗಿದ ರಭಸಕ್ಕೆ ಕತ್ತಿಯ ಕೈ ಹಿಡಿಯುವ ಜಾಗ ತುಂಡಾಗಿದೆ.
ಗೀತಾ ಅವರು ಕೂಗಿದಾಗ ಗಂಡ ಓಡಿ ಬಂದಿದ್ದು ಕೈ ಭಾಷೆಯಲ್ಲೇ ಕತ್ತಿ ನುಗ್ಗಿದ ಜಾಗ ತೋರಿಸಿದರು ಎನ್ನಲಾಗಿದೆ. ಗಂಡ ಕತ್ತಿಯನ್ನು ಎಳೆದು ತೆಗೆದಾಗ ಗೀತಾ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೃತ ಗೀತಾ ಅವರಿಗೆ 8 ನೇ ತರಗತಿ ಓದುತ್ತಿರುವ ಪುತ್ರ ಹಾಗೂ ಪುತ್ರಿ ಎಲ್.ಕೆ.ಜಿ ಅಭ್ಯಾಸ ನಡೆಸುತ್ತಿದ್ದಾರೆ. ಈ ಕುರಿತು ಮೃತರ ಗಂಡ ಶಿವರಾಮ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…