ಮಂಗಳೂರು: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ.
ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿಕೊಂಡಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ ಆರಂಭಿಸಿದೆ.ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…