ಮಂಗಳೂರು: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ.
ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿಕೊಂಡಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ ಆರಂಭಿಸಿದೆ.ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…