ಮಂಗಳೂರು: ಇಲ್ಲಿನ ರಸ್ತೆಯಲ್ಲಿ ಕೆಲ ಯುವಕರು ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಕೇಸ್ ದಾಖಲಿಸಿದ್ದಕ್ಕಾಗಿ ಪೊಲೀಸ್ ಇನ್ಸ್ಪೆಕ್ಟರ್ಗೆ ಕಡ್ಡಾಯ ರಜೆಯ ಶಿಕ್ಷೆ ನೀಡಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದು, ಬಿ ರಿಪೋರ್ಟ್ ಮಾಡಿ ಕೇಸ್ ರದ್ದು ಮಾಡಿದ್ದಾರೆ. ಕೇಸ್ ದಾಖಲಿಸಿದ್ದಕ್ಕೆ ಮುಸ್ಲಿಮರ ಆಕ್ಷೇಪ ಹಿನ್ನೆಲೆ ಕದ್ರಿ ಪಿಐ ಸೋಮಶೇಖರ್ಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ. ಪೊಲೀಸರ ವಿರುದ್ಧ ತನಿಖೆ ಮಾಡಲು ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ಮಂಗಳೂರಿನ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ಕೆಲ ಅನ್ಯಕೋಮಿನ ಯುವಕರು ನಮಾಜ್ ಮಾಡಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆಯುಂಟಾದ ಹಿನ್ನೆಲೆ ಕದ್ರಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ (ಸುಮೊಟೋ) ದಾಖಲಿಸಿಕೊಂಡಿದ್ದರು. ಐಪಿಸಿ ಸೆಕ್ಷನ್ 341 (ಅಕ್ರಮ ಪ್ರತಿಬಂಧಕ್ಕಾಗಿ ದಂಡನೆ), 283 (ಸಾರ್ವಜನಿಕ ರಸ್ತೆಯಲ್ಲಿ ಅಡ್ಡಿ) ,143 (ವಿಧಿವಿರುದ್ಧ ಕೂಟದ ಸದಸ್ಯ) ,149 (ಏಕೋದ್ದೇಶವನ್ನು ಈಡೇರಿಸುವಲ್ಲಿ ಮಾಡಲಾದ ಅಪರಾಧದ ಬಗ್ಗೆ ವಿಧಿವಿರುದ್ಧ ಕೂಟದ ಪ್ರತಿಯೊಬ್ಬ ಸದಸ್ಯನು ತಪ್ಪಿತಸ್ಥನಾಗಿರುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಕರಾವಳಿಯ ಕಾಂಗ್ರೆಸ್ ಅಲ್ಪಸಂಖ್ಯಾತರು, ಮುಸ್ಲಿಂ ವಲಯ ಮತ್ತು ಪ್ರಗತಿಪರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…