Featured

ಮಂಗಳೂರು : ರಸ್ತೆಯಲ್ಲಿ ನಮಾಜ್​ – ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ : ರಮಾನಾಥ ರೈ – vishwanews24

ಮಂಗಳೂರು : ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವವರ ಮೇಲೆ ಕಾನೂನು ಕ್ರಮ ಆಗಬೇಕು : ಬಿ.ರಮಾನಾಥ ರೈ ಒತ್ತಾಯ

ಮಂಗಳೂರು, : ಕಂಕನಾಡಿ ಮಸೀದಿಯ ಹೊರಗಡೆಯದ್ದು ಅನಗತ್ಯ ವಿಚಾರ. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತವೆ. ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ. ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ, ಕೃತ್ಯ ನಡೆದಾಗಲೂ ಸುಮೋಟೋ ಪ್ರಕರಣ ಆಗಿಲ್ಲ. ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ. ಈ ರೀತಿ ಆ ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವ ಕಾರ್ಯ ಮಾಡಿದವರ ಮೇಲೆ ಕಾನೂನು ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಜಿಲ್ಲೆಯ ಸೌಹಾರ್ದ ಕದಡುವ ಕಾನೂನುಬಾಹಿರ ಕೆಲಸಗಳು ಆದಾಗ ಸುಮೋಟೋ ಪ್ರಕರಣ ದಾಖಲಿಸುವುದು ಸಹಜ. ಆದರೆ ಈ ರೀತಿಯ ಸಣ್ಣ ವಿಚಾರದಲ್ಲಿ ಸಂಬಂಧಪಟ್ಟವರನ್ನು ಕರೆಸಿ ಬುದ್ಧಿವಾದ ಹೇಳುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕಿತ್ತು ಎಂದರು.

ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಅಶ್ರಫ್ ಕೆ., ಅಪ್ಪಿ, ಇಬ್ರಾಹೀಂ ಕೋಡಿಜಾಲ್, ಶುಭೋದಯ ಆಳ್ವ, ಶಶಿಕಲಾ, ದೀಪಕ್ ಪೂಜಾರಿ ಉಪಸ್ಥಿತರಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago