ಮಂಗಳೂರು, : ಕಂಕನಾಡಿ ಮಸೀದಿಯ ಹೊರಗಡೆಯದ್ದು ಅನಗತ್ಯ ವಿಚಾರ. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತವೆ. ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ. ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ, ಕೃತ್ಯ ನಡೆದಾಗಲೂ ಸುಮೋಟೋ ಪ್ರಕರಣ ಆಗಿಲ್ಲ. ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ. ಈ ರೀತಿ ಆ ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವ ಕಾರ್ಯ ಮಾಡಿದವರ ಮೇಲೆ ಕಾನೂನು ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಜಿಲ್ಲೆಯ ಸೌಹಾರ್ದ ಕದಡುವ ಕಾನೂನುಬಾಹಿರ ಕೆಲಸಗಳು ಆದಾಗ ಸುಮೋಟೋ ಪ್ರಕರಣ ದಾಖಲಿಸುವುದು ಸಹಜ. ಆದರೆ ಈ ರೀತಿಯ ಸಣ್ಣ ವಿಚಾರದಲ್ಲಿ ಸಂಬಂಧಪಟ್ಟವರನ್ನು ಕರೆಸಿ ಬುದ್ಧಿವಾದ ಹೇಳುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕಿತ್ತು ಎಂದರು.
ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಅಶ್ರಫ್ ಕೆ., ಅಪ್ಪಿ, ಇಬ್ರಾಹೀಂ ಕೋಡಿಜಾಲ್, ಶುಭೋದಯ ಆಳ್ವ, ಶಶಿಕಲಾ, ದೀಪಕ್ ಪೂಜಾರಿ ಉಪಸ್ಥಿತರಿದ್ದರು.
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…