ಮಂಗಳೂರು, : ಕಂಕನಾಡಿ ಮಸೀದಿಯ ಹೊರಗಡೆಯದ್ದು ಅನಗತ್ಯ ವಿಚಾರ. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತವೆ. ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ. ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ, ಕೃತ್ಯ ನಡೆದಾಗಲೂ ಸುಮೋಟೋ ಪ್ರಕರಣ ಆಗಿಲ್ಲ. ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ. ಈ ರೀತಿ ಆ ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವ ಕಾರ್ಯ ಮಾಡಿದವರ ಮೇಲೆ ಕಾನೂನು ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಜಿಲ್ಲೆಯ ಸೌಹಾರ್ದ ಕದಡುವ ಕಾನೂನುಬಾಹಿರ ಕೆಲಸಗಳು ಆದಾಗ ಸುಮೋಟೋ ಪ್ರಕರಣ ದಾಖಲಿಸುವುದು ಸಹಜ. ಆದರೆ ಈ ರೀತಿಯ ಸಣ್ಣ ವಿಚಾರದಲ್ಲಿ ಸಂಬಂಧಪಟ್ಟವರನ್ನು ಕರೆಸಿ ಬುದ್ಧಿವಾದ ಹೇಳುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕಿತ್ತು ಎಂದರು.
ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಅಶ್ರಫ್ ಕೆ., ಅಪ್ಪಿ, ಇಬ್ರಾಹೀಂ ಕೋಡಿಜಾಲ್, ಶುಭೋದಯ ಆಳ್ವ, ಶಶಿಕಲಾ, ದೀಪಕ್ ಪೂಜಾರಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…