ಮಂಗಳೂರು: ನಗರದ ಕಂಕನಾಡಿ ಮಸೀದಿ ಬಳಿಯ ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಪೊಲೀಸ್ ಕ್ರಮ ಖಂಡಿಸಿ ಕೆ.ಕೆ.ಶಾಹುಲ್ ಹಮೀದ್ ನೇತೃತ್ವದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ನಿಯೋಗ ಬುಧವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಪ್ರಕರಣ ವಾಪಸ್ ಪಡೆಯುವಂತೆ ಆಗ್ರಹಿಸಿದೆ.
ಜಿಲ್ಲೆಯ ಇತಿಹಾಸದಲ್ಲೇ ಇದುವರೆಗೆ ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳು ನಡೆದಾಗ ಇಲ್ಲದ ಸುಮೋಟೋ ಕೇಸ್ ಕೇವಲ 3 ನಿಮಿಷ ಮಸೀದಿಗೆ ತಾಗಿದ ರಸ್ತೆಯಲ್ಲಿ ನಮಾಝ್ ಮಾಡಿದವರ ಮೇಲೆ ಪೊಲೀಸರು ಹಾಕಿದ್ದಾರೆ. ಕೋಮು ಕ್ರಿಮಿಗಳ ಒತ್ತಡಕ್ಕೆ ಮಣಿದು ಪೊಲೀಸರು ಮಾಡಿದ ಕೃತ್ಯದಿಂದಾಗಿ ಮುಸ್ಲಿಂ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ. ಪೊಲೀಸರ ತಾರತಮ್ಯ ನೀತಿಯು ಅತಿರೇಕದ ಪರಮಾವಧಿ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ವಿಧಾನ ಸಭಾಧ್ಯಕ್ಷ, ಗೃಹಸಚಿವ ಮತ್ತು ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ತಕ್ಷಣ ಕೇಸ್ ವಾಪಸ್ ಪಡೆಯುವುದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ಭರವಸೆ ನೀಡಿದರು.
ನಿಯೋಗದಲ್ಲಿ ಪಕ್ಷದ ಮುಖಂಡರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಕಣಚೂರು ಮೋನು, ಎಂ.ಎಸ್.ಮಹಮ್ಮದ್, ಮಾಜಿ ಮೇಯರ್ ಕೆ.ಅಶ್ರಫ್, ಕಾರ್ಪೊರೇಟರ್ ಗಳಾದ ಲತೀಫ್ ಕಂದಕ್, ಸಂಶುದ್ದೀನ್ ಕುದ್ರೋಳಿ, ಅಶ್ರಫ್ ಬಜಾಲ್, ಪದಾಧಿಕಾರಿಗಳಾದ ಹಬೀಬುಲ್ಲಾ ಕಣ್ಣೂರು, ಮಹಮ್ಮದ್ ಬಪ್ಪಳಿಗೆ, ಸಿರಾಜ್ ಬಜ್ಪೆ, ಅಶ್ರಫ್ ಬೆಂಗ್ರೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ಮುಸ್ತಫಾ ಪಾವೂರ್, ವಹಾಬ್ ಕುದ್ರೋಳಿ, ಎ.ಆರ್.ಇಮ್ರಾನ್, ಸಲೀಂ ಪಾಂಡೇಶ್ವರ, ನಿಸಾರ್ ಬಜ್ಪೆ, ಮುನೀರ್, ರಫೀಕ್ ಕಣ್ಣೂರು, ಶರೀಫ್ ವಳಾಲು, ಆಸೀಫ್ ಬಜಾಲ್, ಫಯಾಝ್ ಅಮ್ಮೆಮ್ಮಾರ್ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…