Featured

ಮಂಗಳೂರು: ರಸ್ತೆಯಲ್ಲಿ ನಮಾಝ್ – ಪೊಲೀಸ್ ಪ್ರಕರಣ ವಾಪಾಸು ಪಡೆಯಲು ಅಲ್ಪಸಂಖ್ಯಾತ ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರು: ರಸ್ತೆಯಲ್ಲಿ ನಮಾಝ್ – ಪೊಲೀಸ್ ಪ್ರಕರಣ ವಾಪಾಸು ಪಡೆಯಲು ಅಲ್ಪಸಂಖ್ಯಾತ ಕಾಂಗ್ರೆಸ್ ಆಗ್ರಹ

ಮಂಗಳೂರು: ನಗರದ ಕಂಕನಾಡಿ ಮಸೀದಿ ಬಳಿಯ ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಪೊಲೀಸ್ ಕ್ರಮ ಖಂಡಿಸಿ ಕೆ.ಕೆ.ಶಾಹುಲ್ ಹಮೀದ್ ನೇತೃತ್ವದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ನಿಯೋಗ ಬುಧವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಪ್ರಕರಣ ವಾಪಸ್ ಪಡೆಯುವಂತೆ ಆಗ್ರಹಿಸಿದೆ.

ಜಿಲ್ಲೆಯ ಇತಿಹಾಸದಲ್ಲೇ ಇದುವರೆಗೆ ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳು ನಡೆದಾಗ ಇಲ್ಲದ ಸುಮೋಟೋ ಕೇಸ್ ಕೇವಲ 3 ನಿಮಿಷ ಮಸೀದಿಗೆ ತಾಗಿದ ರಸ್ತೆಯಲ್ಲಿ ನಮಾಝ್ ಮಾಡಿದವರ ಮೇಲೆ ಪೊಲೀಸರು ಹಾಕಿದ್ದಾರೆ. ಕೋಮು ಕ್ರಿಮಿಗಳ ಒತ್ತಡಕ್ಕೆ ಮಣಿದು ಪೊಲೀಸರು ಮಾಡಿದ ಕೃತ್ಯದಿಂದಾಗಿ ಮುಸ್ಲಿಂ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ. ಪೊಲೀಸರ ತಾರತಮ್ಯ ನೀತಿಯು ಅತಿರೇಕದ ಪರಮಾವಧಿ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ವಿಧಾನ ಸಭಾಧ್ಯಕ್ಷ, ಗೃಹಸಚಿವ ಮತ್ತು ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ತಕ್ಷಣ ಕೇಸ್ ವಾಪಸ್ ಪಡೆಯುವುದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ಭರವಸೆ ನೀಡಿದರು.

ನಿಯೋಗದಲ್ಲಿ ಪಕ್ಷದ ಮುಖಂಡರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಕಣಚೂರು ಮೋನು, ಎಂ.ಎಸ್.ಮಹಮ್ಮದ್, ಮಾಜಿ ಮೇಯರ್ ಕೆ.ಅಶ್ರಫ್, ಕಾರ್ಪೊರೇಟರ್ ಗಳಾದ ಲತೀಫ್ ಕಂದಕ್, ಸಂಶುದ್ದೀನ್ ಕುದ್ರೋಳಿ, ಅಶ್ರಫ್ ಬಜಾಲ್, ಪದಾಧಿಕಾರಿಗಳಾದ ಹಬೀಬುಲ್ಲಾ ಕಣ್ಣೂರು, ಮಹಮ್ಮದ್ ಬಪ್ಪಳಿಗೆ, ಸಿರಾಜ್ ಬಜ್ಪೆ, ಅಶ್ರಫ್ ಬೆಂಗ್ರೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ಮುಸ್ತಫಾ ಪಾವೂರ್, ವಹಾಬ್ ಕುದ್ರೋಳಿ, ಎ.ಆರ್.ಇಮ್ರಾನ್, ಸಲೀಂ ಪಾಂಡೇಶ್ವರ, ನಿಸಾರ್ ಬಜ್ಪೆ, ಮುನೀರ್, ರಫೀಕ್ ಕಣ್ಣೂರು, ಶರೀಫ್ ವಳಾಲು, ಆಸೀಫ್ ಬಜಾಲ್, ಫಯಾಝ್ ಅಮ್ಮೆಮ್ಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

16 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

16 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

17 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

17 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

17 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

17 hours ago