ಮಂಗಳೂರು: ರಸ್ತೆಯಲ್ಲೇ ನಮಾಜ್ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದ ವಿಎಚ್.ಪಿ ಮುಖಂಡ ಶರಣ್ ಪಂಪ್ವೆಲ್ ‘ಸಾಮೂಹಿಕ ಹನುಮಾನ್ ಚಾಲೀಸಾ ಪಠಣೆ ಮಾಡುವುದಾಗಿ ಹೇಳಿದ್ದರು. ಈ ಹಿನ್ನಲೆ ಶರಣ್ ಪಂಪ್ವೆಲ್ ಮೇಲೆ ಮಂಗಳೂರು ನಗರ ಸೆನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153(a), 506 ಅಡಿ ದೂರು ದಾಖಲಾಗಿದೆ.
ಕಳೆದ ಶುಕ್ರವಾರ(ಮೇ.24) ಮಂಗಳೂರಿನ ಕಂಕನಾಡಿಯಲ್ಲಿ ಹಗಲು ವೇಳೆಯಲ್ಲಿಯೇ ನಡು ರಸ್ತೆಯಲ್ಲಿ ಮುಸ್ಲಿಂ ಯುವಕರು ನಮಾಜ್ ಮಾಡಿದ್ದರು. ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗಿದ್ದು, ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದರು. ಬಳಿಕ ನಮಾಜ್ ಮಾಡಿದ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಇದಕ್ಕೆ ವ್ಯಾಪಕ ಅಸಮಧಾನ ವ್ಯಕ್ತವಾಗಿತ್ತು. ಈ ಹಿನ್ನಲೆ ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಚುನಾವಣೆ ವೇಳೆ ರಸ್ತೆಯಲ್ಲಿ ಇಫ್ತಾರ್ ಕೂಟ ಮಾಡಿದ್ದಾಗ ಕೂಡ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಮುಂದುವರೆದ ಭಾಗವಾಗಿ ಈಗ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಈ ಮೂಲಕ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಅಲ್ಲಿಯೇ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಲಾಗುವುದು ಎಂದು ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆ ಇದೀಗ ಪೊಲೀಸರು ಶರಣ್ ಪಂಪ್ವೆಲ್ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…