Featured

ಮಂಗಳೂರು: ಶರಣ್ ಪಂಪ್‌ವೆಲ್‌ ವಿರುದ್ಧ ಎಫ್​ಐಆರ್ ದಾಖಲು – vishwanews24

ಮಂಗಳೂರು: ರಸ್ತೆಯಲ್ಲೇ ಹನುಮಾನ್ ಚಾಲೀಸ್ ಪಠಣಕ್ಕೆ ಕರೆ: ಶರಣ್ ಪಂಪ್‌ವೆಲ್‌ ವಿರುದ್ಧ ಎಫ್​ಐಆರ್ ದಾಖಲು

ಮಂಗಳೂರು: ರಸ್ತೆಯಲ್ಲೇ ನಮಾಜ್ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದ ವಿಎಚ್.ಪಿ ಮುಖಂಡ ಶರಣ್ ಪಂಪ್‌ವೆಲ್‌ ‘ಸಾಮೂಹಿಕ ಹನುಮಾನ್ ಚಾಲೀಸಾ ಪಠಣೆ ಮಾಡುವುದಾಗಿ ಹೇಳಿದ್ದರು. ಈ ಹಿನ್ನಲೆ ಶರಣ್ ಪಂಪ್‌ವೆಲ್‌ ಮೇಲೆ ಮಂಗಳೂರು ನಗರ ಸೆನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153(a), 506 ಅಡಿ ದೂರು ದಾಖಲಾಗಿದೆ.

ಕಳೆದ ಶುಕ್ರವಾರ(ಮೇ.24) ಮಂಗಳೂರಿನ ಕಂಕನಾಡಿಯಲ್ಲಿ ಹಗಲು ವೇಳೆಯಲ್ಲಿಯೇ ನಡು ರಸ್ತೆಯಲ್ಲಿ ಮುಸ್ಲಿಂ ಯುವಕರು ನಮಾಜ್ ಮಾಡಿದ್ದರು. ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗಿದ್ದು, ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದರು. ಬಳಿಕ ನಮಾಜ್​ ಮಾಡಿದ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಇದಕ್ಕೆ ವ್ಯಾಪಕ ಅಸಮಧಾನ ವ್ಯಕ್ತವಾಗಿತ್ತು. ಈ ಹಿನ್ನಲೆ ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಚುನಾವಣೆ ವೇಳೆ ರಸ್ತೆಯಲ್ಲಿ ಇಫ್ತಾರ್ ಕೂಟ ಮಾಡಿದ್ದಾಗ ಕೂಡ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಮುಂದುವರೆದ ಭಾಗವಾಗಿ ಈಗ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಈ ಮೂಲಕ‌ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಅಲ್ಲಿಯೇ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಲಾಗುವುದು ಎಂದು ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆ ಇದೀಗ ಪೊಲೀಸರು ಶರಣ್​ ಪಂಪ್​ವೆಲ್​ ವಿರುದ್ದ ಎಫ್​ಐಆರ್​ ದಾಖಲಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago