Featured

ಮಂಗಳೂರು: ರಸ್ತೆ ಅಭಿವೃದ್ಧಿ ಕಾಮಗಾರಿ ; ವಾಹನ ಸಂಚಾರ ನಿಷೇಧ – ಬದಲಿ ಮಾರ್ಗಕ್ಕೆ ಆದೇಶ – Vishwanews24

ಮಂಗಳೂರು: ರಸ್ತೆ ಅಭಿವೃದ್ಧಿ ಕಾಮಗಾರಿ ; ವಾಹನ ಸಂಚಾರ ನಿಷೇಧ – ಬದಲಿ ಮಾರ್ಗಕ್ಕೆ ಆದೇಶ

ಮಂಗಳೂರು: ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

📛 ಮಂಗಳೂರು: ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ : ಆರೋಪಿ ಬಂಧನ – Vishwanews24

ಬದಲಿ ರಸ್ತೆ ವ್ಯವಸ್ಥೆ: ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಬಜಪೆ ಚರ್ಚ್ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಬಜಪೆ ಠಾಣೆಯ ಎದುರಿನ ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಮುರ ಜಂಕ್ಷನ್, ಕಿನ್ನಿಪದವು ರಸ್ತೆ ಮೂಲಕ ಮಂಗಳೂರಿಗೆ ತಲುಪುವುದು.

ಮಂಗಳೂರಿನಿಂದ ಕಟೀಲು ಕಡೆಗೆ ಸಂಚರಿಸುವ ವಾಹನಗಳು ಮಂಗಳೂರಿನಿಂದ ಮರವೂರು ಸೇತುವೆ, ಕೆಂಜಾರು ಮಾರ್ಗವಾಗಿ ಕಿನ್ನಿಪದವು ಜಂಕ್ಷನ್ ನಲ್ಲಿ ಬಲಕ್ಕೆ ತಿರುಗಿ ಮುರ ಜಂಕ್ಷನ್, ಬಜಪೆ ಪೊಲೀಸ್ ಸ್ಟೇಷನ್ ಎದುರುಗಡೆಯಿಂದ ಬಜಪೆ ಚರ್ಚ್ ಜಂಕ್ಷನ್ ರಸ್ತೆಯ ಮೂಲಕ ಕಟೀಲು ಕಡೆಗೆ ಸಂಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

📛 ಮಂಗಳೂರು: ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ : ಆರೋಪಿ ಬಂಧನ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago