ಮಂಗಳೂರು : ಮಂಗಳೂರಿನ ವೆಲೆನ್ಸಿಯಾ ಪ್ರದೇಶದಲ್ಲಿರುವ ರಿಟ್ರೀಟ್ ಹೌಸ್ ಸಮೀಪ ಗುರುವಾರ ಮುಂಜಾನೆ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಮೂಲಗಳ ಪ್ರಕಾರ, ನಂದಿಗುಡ್ಡ ಕಡೆಯಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಸುಮಾರು 6.45ರ ವೇಳೆಗೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸಾರ್ವಜನಿಕರು ಧಾವಿಸಿ ಕಾರನ್ನು ಸರಿಯಾಗಿ ತಿರುಗಿಸಿ ನಿಲ್ಲಿಸಲು ಸಹಾಯ ಮಾಡಿದರು. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಅದಾಗ್ಯೂ ಅಪಘಾತದ ಬಳಿಕ ಚಾಲಕ ಸ್ಥಳದಿಂದ ಹೊರಟುಹೋಗಿದ್ಧಾನೆ ಎನ್ನಲಾಗಿದೆ. 112 ತುರ್ತು ಸಹಾಯವಾಣಿಗೆ ಮಾಹಿತಿ ಬಂದ ಸುಮಾರು 15 ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…