ಮಂಗಳೂರು : ಮಂಗಳೂರಿನ ವೆಲೆನ್ಸಿಯಾ ಪ್ರದೇಶದಲ್ಲಿರುವ ರಿಟ್ರೀಟ್ ಹೌಸ್ ಸಮೀಪ ಗುರುವಾರ ಮುಂಜಾನೆ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಮೂಲಗಳ ಪ್ರಕಾರ, ನಂದಿಗುಡ್ಡ ಕಡೆಯಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಸುಮಾರು 6.45ರ ವೇಳೆಗೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸಾರ್ವಜನಿಕರು ಧಾವಿಸಿ ಕಾರನ್ನು ಸರಿಯಾಗಿ ತಿರುಗಿಸಿ ನಿಲ್ಲಿಸಲು ಸಹಾಯ ಮಾಡಿದರು. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಅದಾಗ್ಯೂ ಅಪಘಾತದ ಬಳಿಕ ಚಾಲಕ ಸ್ಥಳದಿಂದ ಹೊರಟುಹೋಗಿದ್ಧಾನೆ ಎನ್ನಲಾಗಿದೆ. 112 ತುರ್ತು ಸಹಾಯವಾಣಿಗೆ ಮಾಹಿತಿ ಬಂದ ಸುಮಾರು 15 ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…