Featured

ಮಂಗಳೂರು:  ರಾಜಕೀಯ ಮೈಲೇಜಿಗೋಸ್ಕರ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ : ಅಣ್ಣಾಮಲೈ ಆರೋಪ – vishwanews24

ನಕ್ಸಲ್ ಶರಣಾಗತಿ, ವಿಕ್ರಮ್ ಗೌಡನ ಎನ್ಕೌಂಟರ್ ಬಗ್ಗೆ ಅನುಮಾನವಿದೆ : ಅಣ್ಣಾಮಲೈ

ಮಂಗಳೂರು: ಕರ್ನಾಟಕದ ಇತ್ತೀಚಿಗೆ ನಡೆದ ನಕ್ಸಲ್ ಶರಣಾಗತಿ, ಎನ್ಕೌಂಟರ್ ಬಗ್ಗೆ ಅನುಮಾನ ಮೂಡುತ್ತಿದೆ. ಇಲ್ಲಿ ರಾಜಕೀಯ ಮೈಲೇಜಿಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿಂದು ಮಾತನಾಡಿದ ಅವರು, ನಕ್ಸಲ್ ಶರಣಾಗತಿ ನಿಯಮ ಬಹಳ ದೊಡ್ಡಮಟ್ಟದ ಪ್ರಕ್ರಿಯೆ. ಶರಣಾಗತಿ ಸಂದರ್ಭ ಕೆಲವೊಂದು ಶರತ್ತುಗಳಿರುತ್ತವೆ. ಆದರೆ ಕರ್ನಾಟಕದಲ್ಲಿ ಮೊನ್ನೆ ನಡೆದ ನಕ್ಸಲ್ ಶರಣಾಗತಿಯ ಬಗ್ಗೆ ಸ್ವಲ್ಪ ಅನುಮಾನ ಮೂಡುತ್ತಿದೆ. ನಕ್ಸಲ್ ಮುಖಂಡ ವಿಕ್ರಮ್ ಗೌಡನ ಎನ್ಕೌಂಟರ್ ನಲ್ಲೂ ಅನುಮಾನವಿದೆ. ಎನ್ಕೌಂಟರ್ ಆದ ತಕ್ಷಣ ನಕ್ಸಲ್ ಶರಣಾದರು ಎಂದು ಸರಕಾರ ಹೇಳುತ್ತಿದೆ. ನಕ್ಸಲರು ಶರಣಾಗುವಂತೆ ಯಾರು ಮಾತುಕತೆ ನಡೆಸಿದರು ಎಂಬುದು ತಿಳಿದಿಲ್ಲ. ನಕ್ಸಲ್ ತಂಡದೊಳಗಡೆ ಇರುವ ಆಂತರಿಕ ರಾಜಕೀಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅಣ್ಣಾಮಲೈ ಹೇಳಿದರು.

ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್ಪಿಯಾಗಿದ್ದ ಸಂದರ್ಭ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ ಜಿಲ್ಲಾಧಿಕಾರಿ ಮತ್ತು ಎಸ್ಪಿಯ ಎದುರು ನಕ್ಸಲರು ಶರಣಾಗಬೇಕು. ಆನಂತರ ಬೇರೆ ಪ್ರಕ್ರಿಯೆಗಳು ನಡೆಯುತ್ತವೆ. ಇಲ್ಲಿ ರಾಜಕೀಯ ಮೈಲೇಜ್ ಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ. ನಕ್ಸಲ್ ಬೆಂಬಲಿಗರು ಸರಕಾರದ ಮೇಲೆ ಪ್ರಭಾವ ಬೀರಿದ್ದಾರೆ. ನಾಗರಿಕ ಸಮಾಜದ ಮೇಲೂ ಇವರು ಪ್ರಭಾವ ಬೀರಲಿದ್ದಾರೆ ಎಂದು ಅವರು ಆರೋಪಿಸಿದರು.

ನಕ್ಸಲರು ಶರಣಾದಾಗ ಜನರಿಗೆ ವಿಶ್ವಾಸ ಬರಬೇಕು. ನಕ್ಸಲರ ಶರಣಾಗತಿಯ ಬಗ್ಗೆ ಜನರಿಗೆ ವಿಶ್ವಾಸವಿಲ್ಲ. ಶರಣಾಗತಿಯ ಬಗ್ಗೆ ಗೃಹಸಚಿವರೇ ಮಾಹಿತಿಯ ಕೊರತೆಯಿದ್ದ ಹಾಗೆ ಉಲ್ಟಾ-ಪಲ್ಟಾ ಮಾತನಾಡುತ್ತಾರೆ. ಶರಣಾದ ನಕ್ಸಲರು ನಾಗರಿಕ ಸಮಾಜದ ಮೇಲೆ ಪ್ರಭಾವ ಬೀರುವ ಅಪಾಯವಿದೆ ಎಂದು ಅಣ್ಣಾಮಲೈ ಎಂದು ಹೇಳಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago