Featured

ಮಂಗಳೂರು:  ರಾಜಕೀಯ ಮೈಲೇಜಿಗೋಸ್ಕರ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ : ಅಣ್ಣಾಮಲೈ ಆರೋಪ – vishwanews24

ನಕ್ಸಲ್ ಶರಣಾಗತಿ, ವಿಕ್ರಮ್ ಗೌಡನ ಎನ್ಕೌಂಟರ್ ಬಗ್ಗೆ ಅನುಮಾನವಿದೆ : ಅಣ್ಣಾಮಲೈ

ಮಂಗಳೂರು: ಕರ್ನಾಟಕದ ಇತ್ತೀಚಿಗೆ ನಡೆದ ನಕ್ಸಲ್ ಶರಣಾಗತಿ, ಎನ್ಕೌಂಟರ್ ಬಗ್ಗೆ ಅನುಮಾನ ಮೂಡುತ್ತಿದೆ. ಇಲ್ಲಿ ರಾಜಕೀಯ ಮೈಲೇಜಿಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿಂದು ಮಾತನಾಡಿದ ಅವರು, ನಕ್ಸಲ್ ಶರಣಾಗತಿ ನಿಯಮ ಬಹಳ ದೊಡ್ಡಮಟ್ಟದ ಪ್ರಕ್ರಿಯೆ. ಶರಣಾಗತಿ ಸಂದರ್ಭ ಕೆಲವೊಂದು ಶರತ್ತುಗಳಿರುತ್ತವೆ. ಆದರೆ ಕರ್ನಾಟಕದಲ್ಲಿ ಮೊನ್ನೆ ನಡೆದ ನಕ್ಸಲ್ ಶರಣಾಗತಿಯ ಬಗ್ಗೆ ಸ್ವಲ್ಪ ಅನುಮಾನ ಮೂಡುತ್ತಿದೆ. ನಕ್ಸಲ್ ಮುಖಂಡ ವಿಕ್ರಮ್ ಗೌಡನ ಎನ್ಕೌಂಟರ್ ನಲ್ಲೂ ಅನುಮಾನವಿದೆ. ಎನ್ಕೌಂಟರ್ ಆದ ತಕ್ಷಣ ನಕ್ಸಲ್ ಶರಣಾದರು ಎಂದು ಸರಕಾರ ಹೇಳುತ್ತಿದೆ. ನಕ್ಸಲರು ಶರಣಾಗುವಂತೆ ಯಾರು ಮಾತುಕತೆ ನಡೆಸಿದರು ಎಂಬುದು ತಿಳಿದಿಲ್ಲ. ನಕ್ಸಲ್ ತಂಡದೊಳಗಡೆ ಇರುವ ಆಂತರಿಕ ರಾಜಕೀಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅಣ್ಣಾಮಲೈ ಹೇಳಿದರು.

ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್ಪಿಯಾಗಿದ್ದ ಸಂದರ್ಭ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ ಜಿಲ್ಲಾಧಿಕಾರಿ ಮತ್ತು ಎಸ್ಪಿಯ ಎದುರು ನಕ್ಸಲರು ಶರಣಾಗಬೇಕು. ಆನಂತರ ಬೇರೆ ಪ್ರಕ್ರಿಯೆಗಳು ನಡೆಯುತ್ತವೆ. ಇಲ್ಲಿ ರಾಜಕೀಯ ಮೈಲೇಜ್ ಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ. ನಕ್ಸಲ್ ಬೆಂಬಲಿಗರು ಸರಕಾರದ ಮೇಲೆ ಪ್ರಭಾವ ಬೀರಿದ್ದಾರೆ. ನಾಗರಿಕ ಸಮಾಜದ ಮೇಲೂ ಇವರು ಪ್ರಭಾವ ಬೀರಲಿದ್ದಾರೆ ಎಂದು ಅವರು ಆರೋಪಿಸಿದರು.

ನಕ್ಸಲರು ಶರಣಾದಾಗ ಜನರಿಗೆ ವಿಶ್ವಾಸ ಬರಬೇಕು. ನಕ್ಸಲರ ಶರಣಾಗತಿಯ ಬಗ್ಗೆ ಜನರಿಗೆ ವಿಶ್ವಾಸವಿಲ್ಲ. ಶರಣಾಗತಿಯ ಬಗ್ಗೆ ಗೃಹಸಚಿವರೇ ಮಾಹಿತಿಯ ಕೊರತೆಯಿದ್ದ ಹಾಗೆ ಉಲ್ಟಾ-ಪಲ್ಟಾ ಮಾತನಾಡುತ್ತಾರೆ. ಶರಣಾದ ನಕ್ಸಲರು ನಾಗರಿಕ ಸಮಾಜದ ಮೇಲೆ ಪ್ರಭಾವ ಬೀರುವ ಅಪಾಯವಿದೆ ಎಂದು ಅಣ್ಣಾಮಲೈ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

2 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

6 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

8 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

10 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

10 hours ago