ಮಂಗಳೂರು: ರಾಜ್ಯದಲ್ಲಿ ಯಾವುದೇ ಧರ್ಮ ಯುದ್ಧ ನಡೆಯುತ್ತಿಲ್ಲ. ಸಂಘಟನೆಗಳು ಪ್ರಚೋದನಕಾರಿ ಮಾತನಾಡುವುದು ವಿಚಾರ ಅಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ.
ಕೆಲವರು ಹಿನ್ನೆಲೆಯಿಂದ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಗಮನಿಸಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಇವತ್ತು ಮಂಗಳೂರಿನಲ್ಲಿ ಬಿಜೆಪಿ ವಿಭಾಗೀಯ ಸರಣಿ ಸಭೆಗಳಿವೆ. ಜಿಲ್ಲಾವಾರು ಸಭೆಗಳು ಮತ್ತು ನಾಯಕರ ಸಭೆಗಳಿವೆ. ಚುನಾವಣಾ ತಯಾರಿ ಹಿನ್ನೆಲೆ ವಿಭಾಗ ಮಟ್ಟದ ಸಭೆಗಳನ್ನು ಮಾಡುತ್ತಿದ್ದೇವೆ. ಎ.16 ಮತ್ತು 17 ರಾಜ್ಯ ಕಾರ್ಯಾಕಾರಿಣಿ ಸಭೆ ಮಾಡಿ ಪಕ್ಷದ ಚರ್ಚೆ ಮಾಡುತ್ತೇವೆ ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಯಾವುದೇ ರೀತಿಯಲ್ಲಿ ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಗಮನಿಸಲು ಹೇಳಿದ್ದೇನೆ. ಡಿಜಿಪಿ ನಿನ್ನೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಾತನಾಡಿದ್ದಾರೆ. ಕಾನೂನು ಸುವ್ಯವಸ್ಥೆ ಮತ್ತು ಕಾನೂನು ರಕ್ಷಣೆ ಬಗ್ಗೆ ಸೂಚನೆ ಕೊಟ್ಟಿದ್ದಾರೆ. ನಾವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…