ಮಂಗಳೂರು : ಮಂಡ್ಯ ಜಿಲ್ಲೆ ಕರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆಗೆದುಹಾಕಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರಾಜ್ಯಾದ್ಯಂತ ಫೆಬ್ರವರಿ 9 ರವರೆಗೆ ಹನುಮಧ್ವಜ ಅಭಿಯಾನ ನಡೆಸುತ್ತಿರುವುದಾಗಿ ಬಜರಂಗದಳ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ಹಿಂದೂಗಳ ಮನೆ ಮನೆಗಳಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ಹನುಮಧ್ವಜ ಹಾರಿಸಲಾಗುವುದು. ಕರೆಗೋಡಿನಲ್ಲಿ ಹನುಮಧ್ವಜ ಹಾರಿಸಲು ಅವಕಾಶ ನೀಡುವಂತೆ ಕೋರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಇದೇ 9ರಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಫೆ.10ರಂದು ಎಲ್ಲೆಡೆ ಹನುಮಾನ್ ಚಾಲೀಸಾ ಪಠಣ ನಡೆಸಲಾಗುವುದು ಎಂದರು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮತಬ್ಯಾಂಕ್ಗಾಗಿ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದು, ಹನುಮ ಧ್ವಜ ತೆರವುಗೊಳಿಸಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಇದನ್ನು ಪ್ರತಿಭಟಿಸಿ ಎಲ್ಲ ಹಿಂದೂಗಳು ತಮ್ಮ ಮನೆಗಳಲ್ಲಿ ಹನುಮ ಧ್ವಜ ಹಾಕಬೇಕು ಎಂದು ಅವರು ಮನವಿ ಮಾಡಿದರು.
ಆಪ್ಘಾನಿಸ್ತಾನ, ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣವಾಗಬೇಕು ಎಂಬುದು ನಮ್ಮ ಬೇಡಿಕೆ. ಪ್ರತಿ ವರ್ಷ ಆಗಸ್ಟ್ 14ರಂದು ನಾವು ಅಖಂಡ ಭಾರತ ಸಂಕಲ್ಪ ದಿನ ಮಾಡುತ್ತೇವೆ. ದೇಶ ವಿಭಜನೆ ಬಗ್ಗೆ ಸಂಸದ ಡಿ.ಕೆ. ಸುರೇಶ್ ಆಡಿರುವ ಮಾತು ಖಂಡನೀಯ. ಕಾಂಗ್ರೆಸ್ಸಿಗರು ದೇಶವನ್ನು ತುಂಡು ಮಾಡಿದ್ದಾರೆ. ಈಗಲೂ ಅದನ್ನೇ ಮಾಡಲು ಹೊರಟಿದ್ದಾರೆ‘ ಎಂದು ಟೀಕಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ಇರುವ ಸ್ಥಳ ವಕ್ಫ್ ಮಂಡಳಿಯ ಆಸ್ತಿ ಅಲ್ಲ ಎಂದು ನ್ಯಾಯಾಲಯದ ತೀರ್ಪು ಬಂದಿದೆ. ಜ್ಞಾನವಾಪಿ, ಮಳಲಿ ಹಿಂದೆ ಮಂದಿರಗಳೇ ಆಗಿದ್ದವು. ಮುಸ್ಲಿಂ ಆಕ್ರಮಣದ ನಂತರ ಅವುಗಳನ್ನು ಮಸೀದಿಗಳನ್ನಾಗಿ ಪರಿವರ್ತಿಸಲಾಯಿತು. ಮಳಲಿಯಲ್ಲಿ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ’ ಎಂದು ಸುನೀಲ್ ಕೆ.ಆರ್. ಪ್ರತಿಕ್ರಿಯಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…