Featured

ಮಂಗಳೂರು : ರಾಜ್ಯಾದ್ಯಂತ ಫೆಬ್ರವರಿ 9 ರವರೆಗೆ ಹನುಮಧ್ವಜ ಅಭಿಯಾನ : ಬಜರಂಗದಳ – vishwanews24

ಮಂಗಳೂರು : ರಾಜ್ಯಾದ್ಯಂತ ಫೆಬ್ರವರಿ 9 ರವರೆಗೆ ಹನುಮಧ್ವಜ ಅಭಿಯಾನ : ಬಜರಂಗದಳ

ಮಂಗಳೂರು : ಮಂಡ್ಯ ಜಿಲ್ಲೆ ಕರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆಗೆದುಹಾಕಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರಾಜ್ಯಾದ್ಯಂತ ಫೆಬ್ರವರಿ 9 ರವರೆಗೆ ಹನುಮಧ್ವಜ ಅಭಿಯಾನ ನಡೆಸುತ್ತಿರುವುದಾಗಿ ಬಜರಂಗದಳ ಪ್ರಾಂತ ಸಂಯೋಜಕ ಸುನೀಲ್‌ ಕೆ.ಆರ್‌. ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ಹಿಂದೂಗಳ ಮನೆ ಮನೆಗಳಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ಹನುಮಧ್ವಜ ಹಾರಿಸಲಾಗುವುದು. ಕರೆಗೋಡಿನಲ್ಲಿ ಹನುಮಧ್ವಜ ಹಾರಿಸಲು ಅವಕಾಶ ನೀಡುವಂತೆ ಕೋರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಇದೇ 9ರಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಫೆ.10ರಂದು ಎಲ್ಲೆಡೆ ಹನುಮಾನ್‌ ಚಾಲೀಸಾ ಪಠಣ ನಡೆಸಲಾಗುವುದು ಎಂದರು. ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಮತಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದು, ಹನುಮ ಧ್ವಜ ತೆರವುಗೊಳಿಸಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಇದನ್ನು ಪ್ರತಿಭಟಿಸಿ ಎಲ್ಲ ಹಿಂದೂಗಳು ತಮ್ಮ ಮನೆಗಳಲ್ಲಿ ಹನುಮ ಧ್ವಜ ಹಾಕಬೇಕು ಎಂದು ಅವರು ಮನವಿ ಮಾಡಿದರು.

ಆಪ್ಘಾನಿಸ್ತಾನ, ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣವಾಗಬೇಕು ಎಂಬುದು ನಮ್ಮ ಬೇಡಿಕೆ. ಪ್ರತಿ ವರ್ಷ ಆಗಸ್ಟ್‌ 14ರಂದು ನಾವು ಅಖಂಡ ಭಾರತ ಸಂಕಲ್ಪ ದಿನ ಮಾಡುತ್ತೇವೆ. ದೇಶ ವಿಭಜನೆ ಬಗ್ಗೆ ಸಂಸದ ಡಿ.ಕೆ. ಸುರೇಶ್‌ ಆಡಿರುವ ಮಾತು ಖಂಡನೀಯ. ಕಾಂಗ್ರೆಸ್ಸಿಗರು ದೇಶವನ್ನು ತುಂಡು ಮಾಡಿದ್ದಾರೆ. ಈಗಲೂ ಅದನ್ನೇ ಮಾಡಲು ಹೊರಟಿದ್ದಾರೆ‘ ಎಂದು ಟೀಕಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ಇರುವ ಸ್ಥಳ ವಕ್ಫ್‌ ಮಂಡಳಿಯ ಆಸ್ತಿ ಅಲ್ಲ ಎಂದು ನ್ಯಾಯಾಲಯದ ತೀರ್ಪು ಬಂದಿದೆ. ಜ್ಞಾನವಾಪಿ, ಮಳಲಿ ಹಿಂದೆ ಮಂದಿರಗಳೇ ಆಗಿದ್ದವು. ಮುಸ್ಲಿಂ ಆಕ್ರಮಣದ ನಂತರ ಅವುಗಳನ್ನು ಮಸೀದಿಗಳನ್ನಾಗಿ ಪರಿವರ್ತಿಸಲಾಯಿತು. ಮಳಲಿಯಲ್ಲಿ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ’ ಎಂದು ಸುನೀಲ್‌ ಕೆ.ಆರ್‌. ಪ್ರತಿಕ್ರಿಯಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

7 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

8 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago