ಮಂಗಳೂರು : ಮಂಡ್ಯ ಜಿಲ್ಲೆ ಕರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆಗೆದುಹಾಕಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರಾಜ್ಯಾದ್ಯಂತ ಫೆಬ್ರವರಿ 9 ರವರೆಗೆ ಹನುಮಧ್ವಜ ಅಭಿಯಾನ ನಡೆಸುತ್ತಿರುವುದಾಗಿ ಬಜರಂಗದಳ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ಹಿಂದೂಗಳ ಮನೆ ಮನೆಗಳಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ಹನುಮಧ್ವಜ ಹಾರಿಸಲಾಗುವುದು. ಕರೆಗೋಡಿನಲ್ಲಿ ಹನುಮಧ್ವಜ ಹಾರಿಸಲು ಅವಕಾಶ ನೀಡುವಂತೆ ಕೋರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಇದೇ 9ರಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಫೆ.10ರಂದು ಎಲ್ಲೆಡೆ ಹನುಮಾನ್ ಚಾಲೀಸಾ ಪಠಣ ನಡೆಸಲಾಗುವುದು ಎಂದರು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮತಬ್ಯಾಂಕ್ಗಾಗಿ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದು, ಹನುಮ ಧ್ವಜ ತೆರವುಗೊಳಿಸಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಇದನ್ನು ಪ್ರತಿಭಟಿಸಿ ಎಲ್ಲ ಹಿಂದೂಗಳು ತಮ್ಮ ಮನೆಗಳಲ್ಲಿ ಹನುಮ ಧ್ವಜ ಹಾಕಬೇಕು ಎಂದು ಅವರು ಮನವಿ ಮಾಡಿದರು.
ಆಪ್ಘಾನಿಸ್ತಾನ, ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣವಾಗಬೇಕು ಎಂಬುದು ನಮ್ಮ ಬೇಡಿಕೆ. ಪ್ರತಿ ವರ್ಷ ಆಗಸ್ಟ್ 14ರಂದು ನಾವು ಅಖಂಡ ಭಾರತ ಸಂಕಲ್ಪ ದಿನ ಮಾಡುತ್ತೇವೆ. ದೇಶ ವಿಭಜನೆ ಬಗ್ಗೆ ಸಂಸದ ಡಿ.ಕೆ. ಸುರೇಶ್ ಆಡಿರುವ ಮಾತು ಖಂಡನೀಯ. ಕಾಂಗ್ರೆಸ್ಸಿಗರು ದೇಶವನ್ನು ತುಂಡು ಮಾಡಿದ್ದಾರೆ. ಈಗಲೂ ಅದನ್ನೇ ಮಾಡಲು ಹೊರಟಿದ್ದಾರೆ‘ ಎಂದು ಟೀಕಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ಇರುವ ಸ್ಥಳ ವಕ್ಫ್ ಮಂಡಳಿಯ ಆಸ್ತಿ ಅಲ್ಲ ಎಂದು ನ್ಯಾಯಾಲಯದ ತೀರ್ಪು ಬಂದಿದೆ. ಜ್ಞಾನವಾಪಿ, ಮಳಲಿ ಹಿಂದೆ ಮಂದಿರಗಳೇ ಆಗಿದ್ದವು. ಮುಸ್ಲಿಂ ಆಕ್ರಮಣದ ನಂತರ ಅವುಗಳನ್ನು ಮಸೀದಿಗಳನ್ನಾಗಿ ಪರಿವರ್ತಿಸಲಾಯಿತು. ಮಳಲಿಯಲ್ಲಿ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ’ ಎಂದು ಸುನೀಲ್ ಕೆ.ಆರ್. ಪ್ರತಿಕ್ರಿಯಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…