ಮಂಗಳೂರು : ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ಮಾರ್ಚ್ 31 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ತಿಳಿಸಿದ್ದಾರೆ.
ಸಂವಿಧಾನ ಬದ್ಧವಾಗಿರುವ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿರುವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ರಾಜ್ಯ ಸರಕಾರ ತಕ್ಷಣ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸ ಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…