ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24
ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24
ಮಂಗಳೂರು,: ರಾಜ್ಯ ಹೆದ್ದಾರಿಗಳಲ್ಲಿ ಇನ್ನು ಮುಂದೆ ಟೋಲ್ ಸಂಗ್ರಹಿಸುವ ಪ್ರಸ್ತಾಪವನ್ನು ವಿರೋಧಿಸುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.
ಪತ್ರಿಕಾ ಪ್ರಕಟನೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೇಕಾಬಿಟ್ಟಿ ಟೋಲ್ ವಸೂಲಿಯಿಂದ ಕಂಗಾಲಾಗಿರುವ ವಾಹನ ಮಾಲಕರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿಯೂ ಟೋಲ್ ಕಟ್ಟಬೇಕಿರುವ ಪ್ರಸ್ತಾಪಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಹಾದು ಹೋಗುವ ರಾ. ಹೆ. 75ರಲ್ಲಿ ಬಿಸಿರೋಡ್ನ ಬ್ರಹ್ಮರಕೂಟ್ಲು, ರಾಷ್ಟರೀಯ ಹೆದ್ದಾರಿ 66ರಲ್ಲಿ ಎನ್ಐಟಿಕೆ ಸುರತ್ಕಲ್, ಹಾಗೂ ನವಯುಗ ಖಾಸಗಿ ಸಂಸ್ಥೆ ನಿರ್ವಹಿಸುವ ತಲಪಾಡಿ ಹಾಗೂ ಉಡುಪಿ ಜಿಲ್ಲೆಯ ಹೆಜಮಾಡಿ ಸಾಸ್ತಾನದಲ್ಲಿ ಟೋಲ್ ಸಂಗ್ರಹ ಜನರ ಸಿಟ್ಟಿಗೆ ಗುರಿಯಾಗಿದೆ. ಇದಲ್ಲದೆ, ರಾಜ್ಯ ಹೆದ್ದಾರಿಗಳಿಗೂ ಟೋಲ್ ಶುಲ್ಕ ಸಂಗ್ರಹಿಸಲು ಬಿಡ್ ಆಹ್ವಾನ ಮಾಡಿರುವ ಕುರಿತಂತೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಆಪರೇಷನ್ ಕಮಲ ಆಮಿಷ ಪ್ರಕರಣ : ಸಿಎಂ ಬಿಎಸ್ ವೈ ವಿರುದ್ದ ತನಿಖೆಗೆ ಸಮ್ಮತಿ ನೀಡಿದ ಹೈಕೋರ್ಟ್ -Vishwanews24
