ಮಂಗಳೂರು,: ರಾಜ್ಯ ಹೆದ್ದಾರಿಗಳಲ್ಲಿ ಇನ್ನು ಮುಂದೆ ಟೋಲ್ ಸಂಗ್ರಹಿಸುವ ಪ್ರಸ್ತಾಪವನ್ನು ವಿರೋಧಿಸುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.
ಪತ್ರಿಕಾ ಪ್ರಕಟನೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೇಕಾಬಿಟ್ಟಿ ಟೋಲ್ ವಸೂಲಿಯಿಂದ ಕಂಗಾಲಾಗಿರುವ ವಾಹನ ಮಾಲಕರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿಯೂ ಟೋಲ್ ಕಟ್ಟಬೇಕಿರುವ ಪ್ರಸ್ತಾಪಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಹಾದು ಹೋಗುವ ರಾ. ಹೆ. 75ರಲ್ಲಿ ಬಿಸಿರೋಡ್ನ ಬ್ರಹ್ಮರಕೂಟ್ಲು, ರಾಷ್ಟರೀಯ ಹೆದ್ದಾರಿ 66ರಲ್ಲಿ ಎನ್ಐಟಿಕೆ ಸುರತ್ಕಲ್, ಹಾಗೂ ನವಯುಗ ಖಾಸಗಿ ಸಂಸ್ಥೆ ನಿರ್ವಹಿಸುವ ತಲಪಾಡಿ ಹಾಗೂ ಉಡುಪಿ ಜಿಲ್ಲೆಯ ಹೆಜಮಾಡಿ ಸಾಸ್ತಾನದಲ್ಲಿ ಟೋಲ್ ಸಂಗ್ರಹ ಜನರ ಸಿಟ್ಟಿಗೆ ಗುರಿಯಾಗಿದೆ. ಇದಲ್ಲದೆ, ರಾಜ್ಯ ಹೆದ್ದಾರಿಗಳಿಗೂ ಟೋಲ್ ಶುಲ್ಕ ಸಂಗ್ರಹಿಸಲು ಬಿಡ್ ಆಹ್ವಾನ ಮಾಡಿರುವ ಕುರಿತಂತೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಆಪರೇಷನ್ ಕಮಲ ಆಮಿಷ ಪ್ರಕರಣ : ಸಿಎಂ ಬಿಎಸ್ ವೈ ವಿರುದ್ದ ತನಿಖೆಗೆ ಸಮ್ಮತಿ ನೀಡಿದ ಹೈಕೋರ್ಟ್ -Vishwanews24
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…