ಮಂಗಳೂರು,: ರಾಜ್ಯ ಹೆದ್ದಾರಿಗಳಲ್ಲಿ ಇನ್ನು ಮುಂದೆ ಟೋಲ್ ಸಂಗ್ರಹಿಸುವ ಪ್ರಸ್ತಾಪವನ್ನು ವಿರೋಧಿಸುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.
ಪತ್ರಿಕಾ ಪ್ರಕಟನೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೇಕಾಬಿಟ್ಟಿ ಟೋಲ್ ವಸೂಲಿಯಿಂದ ಕಂಗಾಲಾಗಿರುವ ವಾಹನ ಮಾಲಕರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿಯೂ ಟೋಲ್ ಕಟ್ಟಬೇಕಿರುವ ಪ್ರಸ್ತಾಪಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಹಾದು ಹೋಗುವ ರಾ. ಹೆ. 75ರಲ್ಲಿ ಬಿಸಿರೋಡ್ನ ಬ್ರಹ್ಮರಕೂಟ್ಲು, ರಾಷ್ಟರೀಯ ಹೆದ್ದಾರಿ 66ರಲ್ಲಿ ಎನ್ಐಟಿಕೆ ಸುರತ್ಕಲ್, ಹಾಗೂ ನವಯುಗ ಖಾಸಗಿ ಸಂಸ್ಥೆ ನಿರ್ವಹಿಸುವ ತಲಪಾಡಿ ಹಾಗೂ ಉಡುಪಿ ಜಿಲ್ಲೆಯ ಹೆಜಮಾಡಿ ಸಾಸ್ತಾನದಲ್ಲಿ ಟೋಲ್ ಸಂಗ್ರಹ ಜನರ ಸಿಟ್ಟಿಗೆ ಗುರಿಯಾಗಿದೆ. ಇದಲ್ಲದೆ, ರಾಜ್ಯ ಹೆದ್ದಾರಿಗಳಿಗೂ ಟೋಲ್ ಶುಲ್ಕ ಸಂಗ್ರಹಿಸಲು ಬಿಡ್ ಆಹ್ವಾನ ಮಾಡಿರುವ ಕುರಿತಂತೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಆಪರೇಷನ್ ಕಮಲ ಆಮಿಷ ಪ್ರಕರಣ : ಸಿಎಂ ಬಿಎಸ್ ವೈ ವಿರುದ್ದ ತನಿಖೆಗೆ ಸಮ್ಮತಿ ನೀಡಿದ ಹೈಕೋರ್ಟ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…