ಮಂಗಳೂರು :ದುಬೈನಿಂದ ಮಂಗಳೂರಿಗೆ ಬುಧವಾರ ರಾತ್ರಿ ಬಂದಿಳಿಯಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿ ರಾತ್ರಿ ಇಡೀ ವಿಮಾನದಲ್ಲೇ ಕಾಲಕಳೆಯುವಂತಾದ ಘಟನೆ ವರದಿಯಾಗಿದೆ.
ಬುಧವಾರ ರಾತ್ರಿ 11:40 ವಿಮಾನ ಹಾರಾಟ ಆರಂಭಿಸಲಿದೆ ಎಂದು, ಪ್ರಯಾಣಿಕರೆಲ್ಲರನ್ನು ವಿಮಾನದಲ್ಲಿ ಕುಳ್ಳಿರಿಸಲಾಗಿತ್ತು. ಆದರೆ ತಾಸುಗಟ್ಟಲೆ ಕಾದರೂ ದುಬೈಯಿಂದ ಹೊರಡಬೇಕಿದ್ದ ವಿಮಾನ ಹಾರಾಟ ಆರಂಭಿಸಲಿಲ್ಲ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಮಾನವೂ ಗುರುವಾರ ಮಂಜಾನೆವರೆಗೂ ವಿಮಾನವೂ , ನಿಲ್ದಾಣದಲ್ಲೇ ಬಾಕಿಯಾಗಿತ್ತು. ಇನ್ನೇನು ವಿಮಾನ ಹಾರಾಟ ಆರಂಭಿಸುತ್ತದೆ ಎಂದು ಕಾದು ಸುಸ್ತಾದ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು. ಕೊನೆಗೂ ಗುರುವಾರ ನಸುಕಿನ ಜಾವ 5:30ರ ಸುಮಾರಿಗೆ ವಿಮಾನ ಮಂಗಳೂರಿನತ್ತ ಪ್ರಯಾಣ ಆರಂಭಿಸಿತು.
ಏರ್ ಇಂಡಿಯಾ ಸಂಸ್ಥೆಯೂ ಪ್ರಯಾಣಿಕರಿಗೆ ಉಳಿದುಕೊಳ್ಳಲು ಯಾವುದೇ ವ್ಯವಸ್ಥೆ ಮಾಡದೇ ವಿಮಾನದಲ್ಲೇ ಉಳಿಸಿಕೊಳ್ಳಲಾಗಿತ್ತು. ಹೀಗಾಗಿ ಮಹಿಳೆಯರು ಮಕ್ಕಳು ತೊಂದರೆಗೊಳಗಾಗಿದ್ದಾರೆ ಎಂದು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…