Featured

ಮಂಗಳೂರು : ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ 3 ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗೆದ್ದ ಮಂಗಳೂರಿನ ಅಪೇಕ್ಷಾ ಫೆರ್ನಾಂಡೀಸ್‌‌ – VIshwanews24

ಮಂಗಳೂರು : ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ 3 ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗೆದ್ದ ಮಂಗಳೂರಿನ ಅಪೇಕ್ಷಾ ಫೆರ್ನಾಂಡೀಸ್‌‌ – VIshwanews24

ಮಂಗಳೂರು : ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಅಪೇಕ್ಷಾ ಫೆರ್ನಾಂಡೀಸ್‌‌ 3 ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗೆದ್ದಿದ್ದಾರೆ.

16 ವರ್ಷದ ಅಪೇಕ್ಷಾ ಬಾವ್ಲಾನ್‌‌ ಹಾಗೂ ಶಾಲೇಟ್‌ ಫೆರ್ನಾಂಡೀಸ್‌ ದಂಪತಿಯ ಪುತ್ರಿ. ಇವರು ಮಂಗಳೂರಿನವರಾಗಿದ್ದು, ಪ್ರಸ್ತುತ ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಅಪೇಕ್ಷಾ ಬಂಟ್ಸ್‌‌‌ ಸಂಘದ ಎಸ್‌ ಎಂ ಶೆಟ್ಟಿ ಇಂಟರ್‌ನ್ಯಾಷನಲ್‌‌ ಸ್ಕೂಲ್‌‌ ಹಾಗೂ ಪೂವಾಯಿ ಜೂನಿಯರ್‌‌ ಕಾಲೇಜಿನ ವಿದ್ಯಾರ್ಥಿನಿ. ಅಪೇಕ್ಷಾ ಐಐಟಿ ಬಾಂಬೆ ಪೂಲ್‌‌‌ ಹಾಗೂ ಹಿರಾನಂದನಿ ಫಾರೆಸ್ಟ್‌‌ ಕ್ಲಬ್‌ನಲ್ಲಿ ಡಾ. ಮೋಹನ್‌ ರೆಡ್ಡಿ ಅವರ ಅಡಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಅಪೇಕ್ಷಾ ಅವರು 15-17 ವರ್ಷದೊಳಗಿನ ವರ್ಗ 1ರ ಅಡಿಯಲ್ಲಿ ಜೂನಿಯರ್‌ ರಾಷ್ಟ್ರಗಳಲ್ಲಿ ಭಾಗವಹಿಸಿದ್ದು, ಮೂರ ಚಿನ್ನ ಸೇರಿದಂತೆ ನಾಲ್ಕು ಪದಕಗಳನ್ನು ಪಡೆದಿದ್ದಾರೆ. ಅವರು ಅಕ್ಟೋಬರ್‌ 26ರಿಂದ 29ರವರೆಗೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮೊದಲು ಅಪೇಕ್ಷಾ ಯು14 ವಿಭಾಗದಲ್ಲಿ ಜೂನಿಯರ್‌‌‌‌ ರಾಷ್ಟ್ರೀಯ ಚಾಂಪಿಯನ್‌‌‌ ಆಗಿದ್ದರು. ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ 37ನೇ ಸಬ್‌ ಜೂನಿಯರ್‌‌‌ ಹಾಗೂ 47ನೇ ಜೂನಿಯರ್‌‌‌ ಈಜು ಸ್ಪರ್ಧೆ ಚಾಂಪಿಯನ್‌ಶಿಪ್‌‌ನಲ್ಲಿ ಭಾಗವಹಿಸಿದ ಅಪೇಕ್ಷಾ ನಾಲ್ಕು ವಿಭಾಗಗಳಲ್ಲಿ ಪದಕ ಪಡೆದುಕೊಂಡಿದ್ದಾರೆ.

ಅಪೇಕ್ಷಾ 200 ಮೀಟರ್ ವೈಯಕ್ತಿಕ ಮಿಡ್‌ರಿಲೆ, 50 ಮೀಟರ್ ಬ್ರೆಸ್‌ ಸ್ಟ್ರೋಕ್, 200 ಮೀಟರ್ ಬಟರ್‌‌‌ಪ್ಯಾಯ್‌‌ ಸ್ಟ್ರೋಕ್, 100 ಮೀಟರ್ ಬಟರ್‌‌‌ಪ್ಯಾಯ್‌‌ ಸ್ಟ್ರೋಕ್‌‌ನಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಪ್ರಸ್ತುತ, ಅವರು ಮಹಾರಾಷ್ಟ್ರ ತಂಡಕ್ಕಾಗಿ 200 ಮೀಟರ್, 50 ಮೀಟರ್ ಮತ್ತು 4×100 ಮೀಟರ್ ಮಿಡ್‌ ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ದಾಖಲೆ ಗಳಿಸಿದ್ದಾರೆ.

ದಾಯ್ಜಿವಲ್ಡ್ ಜೊತೆ ಮಾತನಾಡಿದ ಅಪೇಕ್ಷಾ ಅವರ ತಾಯಿ ಶಾಲೆಟ್‌‌, ಇದು ಅಪೇಕ್ಷಾನ ಗಮನಾರ್ಹ ಸಾಧನೆಯಾಗಿದೆ. ತರಬೇತಿ ಹಾಗೂ ಅಧ್ಯಯನದ ನಡುವೆ ಸಹಾಯ ಮಾಡಿದ ಶಾಲೆಯ ಪ್ರಾಂಶುಪಾಲರಿಗೆ ಧನ್ಯವಾದ ಹೇಳಬೇಕು ಎಂದು ತಿಳಿಸಿದ್ದಾರೆ.

ಅಪೇಕ್ಷಾಳ ಕೋಚ್‌‌‌‌ ಡಾ, ರೆಡ್ಡಿ ಹಾಗೂ ರಿತೇಶ್‌ ಇವರಿಬ್ಬರ ಶ್ರಮದಿಂದ ಅಪೇಕ್ಷಾ ಈ ಸಾಧನೆ ಮಾಡಿದ್ದಾಳೆ. ಅಪೇಕ್ಷಾ, ತನ್ನ ಶಾಲೆಯ ಪ್ರಾಂಶುಪಾಲ ಮಿಲ್ಡ್ರೆಡ್ ಲೋಬೋ ಹಾಗೂ ಶಿಕ್ಷಕರ ತಂಡವು ನೀಡಿದ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ಕೃತಜ್ಞಳಾಗಿದ್ದಾಳೆ ಎಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago