ಮಂಗಳೂರು: ರಾಹುಲ್ ಗಾಂಧಿಯನ್ನು ಸಂಸದರಾಗಿ ಅನರ್ಹಗೊಳಿಸಿ ಆದೇಶ ನೀಡಿರುವುದು ಸಂಸದೀಯ ನಿಯಮ ಹಾಗೂ ಪ್ರಜಾಪ್ರಭುತ್ವ ಕಗ್ಗೊಲೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿ ಸರ್ ನೇಮ್’ ಹೇಳಿಕೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ ಘೋಷಿಸಿರುನ ಕೋರ್ಟ್ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿದೆ.
ನ್ಯಾಯಾಲಯದ ತೀರ್ಪಿನ ಬಗ್ಗೆ ನಾನೇನೂ ಹೇಳಲಾರೆ. ಆದರೆ, ನ್ಯಾಯಾಲಯವೇ ಆದೇಶವನ್ನು ಅಮಾನತ್ತಿನಲ್ಲಿರಿಸಿ ಮೇಲ್ಮನವಿಗೆ ಅವಕಾಶ ನೀಡಿರುವಾಗ ಸಂಸದ ಸ್ಥಾನದಿಂದ ಅರ್ಹಗೊಳಿಸಿರುವ ಪ್ರಕ್ರಿಯೆ ಮುಂದೆ ದೇಶದ ಪ್ರತಿಯೊಂದು ಸಂಸದರಿಗೂ ಅನ್ವಯವಾಗಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.
ರಾಹುಲ್ ಗಾಂಧಿ ಸತ್ಯ ಮಾತನಾಡಿದರೆ ಬಿಡದವರು ಇನ್ನು ಜನಸಾಮಾನ್ಯರಿಗೆ ಬಿಡಬಹುದೇ ಎಂದು ಪ್ರಶ್ನಿಸಿದ ಅವರು, ದೇಶದ ಜನತೆ ರಾಹುಲ್ ಗಾಂಧಿಯನ್ನು ಭವಿಷ್ಯದ ನಾಯಕ ಎಂದು ಬಿಂಬಿಸುತ್ತಿರುವಾಗ ಭಯದಿಂದ ಈ ರೀತಿಯ ಕೃತ್ಯ ಎಸಗಲಾಗುತ್ತಿದೆ.
ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ. ಸತ್ಯ ಮಾತನಾಡುವ ರಾಹುಲ್ ಜತೆಗೆ ಕಾಂಗ್ರೆಸ್ನ ಪ್ರತಿಯೊಬ್ಬರೂ ಇದ್ದಾರೆ ಎಂದವರು ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…