Featured

ಮಂಗಳೂರು : ರಾಹುಲ್ ಗಾಂಧಿ ಅನರ್ಹ ಪ್ರಕರಣ : ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ : ಯು.ಟಿ.ಖಾದರ್ – Vishwanews24

ಮಂಗಳೂರು : ರಾಹುಲ್ ಗಾಂಧಿ ಅನರ್ಹ ಪ್ರಕರಣ : ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ ,ರಾಹುಲ್ ಜತೆಗೆ ಕಾಂಗ್ರೆಸ್‌ನ ಪ್ರತಿಯೊಬ್ಬರೂ ಇದ್ದಾರೆ : ಯು.ಟಿ.ಖಾದರ್

ಮಂಗಳೂರು: ರಾಹುಲ್ ಗಾಂಧಿಯನ್ನು ಸಂಸದರಾಗಿ ಅನರ್ಹಗೊಳಿಸಿ ಆದೇಶ ನೀಡಿರುವುದು ಸಂಸದೀಯ ನಿಯಮ ಹಾಗೂ ಪ್ರಜಾಪ್ರಭುತ್ವ ಕಗ್ಗೊಲೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿ ಸರ್ ನೇಮ್’ ಹೇಳಿಕೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ ಘೋಷಿಸಿರುನ ಕೋರ್ಟ್ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿದೆ.

ನ್ಯಾಯಾಲಯದ ತೀರ್ಪಿನ ಬಗ್ಗೆ ನಾನೇನೂ ಹೇಳಲಾರೆ. ಆದರೆ, ನ್ಯಾಯಾಲಯವೇ ಆದೇಶವನ್ನು ಅಮಾನತ್ತಿನಲ್ಲಿರಿಸಿ ಮೇಲ್ಮನವಿಗೆ ಅವಕಾಶ ನೀಡಿರುವಾಗ ಸಂಸದ ಸ್ಥಾನದಿಂದ ಅರ್ಹಗೊಳಿಸಿರುವ ಪ್ರಕ್ರಿಯೆ ಮುಂದೆ ದೇಶದ ಪ್ರತಿಯೊಂದು ಸಂಸದರಿಗೂ ಅನ್ವಯವಾಗಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.

ರಾಹುಲ್ ಗಾಂಧಿ ಸತ್ಯ ಮಾತನಾಡಿದರೆ ಬಿಡದವರು ಇನ್ನು ಜನಸಾಮಾನ್ಯರಿಗೆ ಬಿಡಬಹುದೇ ಎಂದು ಪ್ರಶ್ನಿಸಿದ ಅವರು, ದೇಶದ ಜನತೆ ರಾಹುಲ್ ಗಾಂಧಿಯನ್ನು ಭವಿಷ್ಯದ ನಾಯಕ ಎಂದು ಬಿಂಬಿಸುತ್ತಿರುವಾಗ ಭಯದಿಂದ ಈ ರೀತಿಯ ಕೃತ್ಯ ಎಸಗಲಾಗುತ್ತಿದೆ.

ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ. ಸತ್ಯ ಮಾತನಾಡುವ ರಾಹುಲ್ ಜತೆಗೆ ಕಾಂಗ್ರೆಸ್‌ನ ಪ್ರತಿಯೊಬ್ಬರೂ ಇದ್ದಾರೆ ಎಂದವರು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago